ಬೆಂಗಳೂರು, 29 ಜೂನ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಸಚಿವರು ಕ್ಷಿಪ್ರ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಆಗಲಿದೆ. ಡಿ.ಕೆ.ಶಿವಕುಮಾರ್ ಅವರ ಜಾತಕ ಸರಿಯಿಲ್ಲ. ಅಧಿಕಾರವನ್ನು ಅವರು ಒದ್ದು ಕಿತ್ತುಕೊಳ್ಳಬೇಕಿದೆ. ಅವರಿಗೆ ನೈಸರ್ಗಿಕವಾದ ಯೋಗವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಕಾಂಗ್ರೆಸ್ ಅವರು ಪೀಠಿಕೆ ಶುರು ಮಾಡಿದ್ದಾರೆ. ಕಾಂಗ್ರೆಸ್ನೊಳಗೆ ಕ್ಷಿಪ್ರ ಕ್ರಾಂತಿ ಆಗೋದು ಶತಸಿದ್ಧ. ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಭೇಟಿ ಆಗುವಂಥದ್ದೇನಿತ್ತು?. ಕ್ಷಿಪ್ರ ಇಲ್ಲ ಕಡಿಮೆ ಮಟ್ಟದಲ್ಲಿ ಕ್ರಾಂತಿ ಆಗುತ್ತೆ ಅಂತ ಸಚಿವರು ಹೇಳುತ್ತಿದ್ದು. ತೀವ್ರತೆ ಇರೋದನ್ನು ಕಾಂಗ್ರೆಸ್ನವರು ಒಪ್ಪಿಕೊಳ್ಳುತ್ತಿದ್ದು. ಯಾರೂ ಕೂಡ ಅದನ್ನು ನಿರಾಕರಿಸುತ್ತಿಲ್ಲ. ಬದಲಾವಣೆ ಆಗುತ್ತೆ ಅಂತ ಎರಡು ವರ್ಷಗಳಿಂದ ನಡೆಯುತ್ತಿದೆ. ಆ ಕಾಲ ಎದುರಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa