ಕರ್ನಾಟಕದಲ್ಲಿರುವುದು ಕಾಂಗ್ರೆಸ್‍ನ ಭ್ರಷ್ಟ ಸರ್ಕಾರ : ಜೆಡಿಎಸ್
ಬಳ್ಳಾರಿ, 30 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೀನ
ಕರ್ನಾಟಕದಲ್ಲಿರುವುದು ಕಾಂಗ್ರೆಸ್‍ನ ಭ್ರಷ್ಟ ಸರ್ಕಾರ : ಜೆಡಿಎಸ್


ಕರ್ನಾಟಕದಲ್ಲಿರುವುದು ಕಾಂಗ್ರೆಸ್‍ನ ಭ್ರಷ್ಟ ಸರ್ಕಾರ : ಜೆಡಿಎಸ್


ಕರ್ನಾಟಕದಲ್ಲಿರುವುದು ಕಾಂಗ್ರೆಸ್‍ನ ಭ್ರಷ್ಟ ಸರ್ಕಾರ : ಜೆಡಿಎಸ್


ಬಳ್ಳಾರಿ, 30 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ಆರೋಪಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರತಿಭಟನೆಯ ನೇತೃತ್ವವಹಿಸಿದ್ದ ಅವರು, ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ವ್ಯಾಪಕ ಲಂಚಗುಳಿತನ, ಭ್ರಷ್ಟಾಚಾರ ಹೆಚ್ಚಾಗಿದೆ. ಪ್ರತಿ ಇಲಾಖೆಯಲ್ಲಿ ಸ್ವಜನ ಪಕ್ಷಪಾತ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗವಾಗಿ ಸಾಕ್ಷಿಗಳ ಸಮೇತರಾಗಿ ವ್ಯಾಪಕ ಅಪಸ್ವರ ಎತ್ತಿದ್ದಾರೆ ಎಂದರು.

ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆಕಟ್ಟೆಗಳ ಪುನರುಜ್ಜೀವನ, ಒಳಚರಂಡಿ, ಶುದ್ಧವದ ಕುಡಿಯುವ ನೀರು, ಉಚಿತ ಶಿಕ್ಷಣವನ್ನು ಪೂರೈಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾಮಗಾರಿಗಳನ್ನು ನಡೆಸಿದ ಗುತ್ತಿಗೆದಾರರ ಬಿಲ್‍ನ ಹಣ ಪಾವತಿಸುತ್ತಿಲ್ಲ. ಈ ಸರ್ಕಾರ ಬಡ ಮತ್ತು ಜನವಿರೋಧಿ, ರೈತ ವಿರೋಧಿ ಸರ್ಕಾರವಾಗಿದೆ ಎಂದರು.

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಎದುರಿಸುತ್ತಿರುವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಿ, ಸಿಬಿಐ ತನಿಖೆಗೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು - ಕಾರ್ಯಕರ್ತರು ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande