ಕೋಲಾರ, ೩೦ ಜೂನ್ (ಹಿ.ಸ) :
ಆ್ಯಂಕರ್ : ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಮುಲ್) ಆಡಳಿತ ಮಂಡಳಿಗೆ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನಗರದ ಚಿಕ್ಕಬಳ್ಳಾಪುರ ರಸ್ತೆಯ ಪ್ರಶಾಂತನಗರದ ನಿವಾಸಿ ಯೂನುಸ್ ಶರೀಫ್ ಅವರನ್ನು ನೇಮಕ ಮಾಡಲಾಗಿದೆ.
ಸರ್ಕಾರದ ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರಿಗೆ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಅಧೀನ ಕಾರ್ಯದರ್ಶಿ ಸಹಕಾರ ಇಲಾಖೆಯ ಜಿ ರಂಗನಾಥ್ ನೇಮಕ ಮಾಡಿದ್ದಾರೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಯ (ಕೋಚಿಮುಲ್) ಆಡಳಿತ ಮಂಡಳಿಗೂ ಯೂನುಸ್ ಶರೀಫ್ ಅವರನ್ನೇ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನೇಮಕ ಮಾಡಲಾಗಿತ್ತು ಕೋಲಾರ ಜಿಲ್ಲೆಯಲ್ಲಿ ಕೋಮುಲ್ ಒಕ್ಕೂಟವು ಪ್ರತ್ಯೇಕವಾಗಿದ ನಂತರವು ಅವರನ್ನೇ ನೇಮಕ ಮಾಡಿ ಆದೇಶ ಮಾಡಲಾಗಿದೆ,
ಚಿತ್ರ : ಯೂನುಸ್ ಶರೀಪ್
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್