ಬೆಳಗಾವಿ, 04 ಜೂನ್ (ಹಿ.ಸ.) :
ಆ್ಯಂಕರ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್-2025 ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಆರ್ಸಿಬಿ ತಂಡದ ಅಭಿಮಾನಿಯೊರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಪಂದ್ಯ ಮುಗಿದ ಬಳಿಕ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಸಂಭ್ರಮಾಚರಣೆ ವೇಳೆ ಈ ದುರಂತ ಸಂಭವಿಸಿದೆ. ಆರ್ಸಿಬಿ ಅಭಿಮಾನಿ ಮಂಜುನಾಥ್ ಕುಂಬಾರ ಮೃತಪಟ್ಟ ದುರ್ದೈವಿ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa