ಬಳ್ಳಾರಿ, 05 ಜೂನ್ (ಹಿ.ಸ.) :
ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಶಾಸಕ ನಾರಾ ಭರತರೆಡ್ಡಿ ಅವರು ಸಸಿ ನೆಡುವ ಮೂಲಕ ವಿಶ್ವಪರಿಸರ ದಿನಾಚರಣೆಯನ್ನು ಗುರುವಾರ ಆಚರಿಸಿದ್ದಾರೆ.
ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಒಕ್ಕೂಟವು ಕಾಲೇಜಿನ ಆವರಣದಲ್ಲಿ `ಮಿಯಾವೊಕಿ ಫಾರೆಸ್ಟ್' ಮಾದರಿಯಲ್ಲಿ ಒಂದು ಎಕರೆ ಜಾಗದಲ್ಲಿ ಹಸಿರು ತಾಣ (ಒಂದು ಎಕರೆ ಆಕ್ಸಿಜನ್) ಆಗಿ ನಿರ್ಮಾಣ ಮಾಡಲು, ಸಸಿಗಳನ್ನು ನೆಟ್ಟು ನೀರುಣಿಸಿದರು.
ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಣೇಕಲ್ ಮಹಾಂತೇಶ್, ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಜಾನೆಕುಂಟೆ ಬಸವರಾಜ, ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಯಾಳ್ಪಿ ಪೆÇಂಪನಗೌಡ, ಚೋರನೂರು ಕೊಟ್ರಪ್ಪ, ಪಲ್ಲೇದ ಪ್ರಭುಲಿಂಗ, ಕೋರಿ ವಿರೂಪಾಕ್ಷಪ್ಪ, ಮುಖಂಡರಾದ ಚಾನಾಳ್ ಶೇಖರ್, ಅರಣ್ಯಾಧಿಕಾರಿ ಶರಣಕುಮಾರ್, ಮಹಾನಗರ ಪಾಲಿಕೆಯ ಸದಸ್ಯ ನೂರ್ ಮೊಹಮ್ಮದ್ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್