ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಿ- ಜಿಲ್ಲಾಧಿಕಾರಿ
ಕೊಪ್ಪಳ, 05 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಜೂನ್ 7 ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ. ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಜಿಲ್ಲೆಯ ಮುಸ್ಲೀಂ ಸಮಾಜದ
ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಿ- ಜಿಲ್ಲಾಧಿಕಾರಿ


ಕೊಪ್ಪಳ, 05 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಜೂನ್ 7 ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ.

ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಜಿಲ್ಲೆಯ ಮುಸ್ಲೀಂ ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕರೆದ ಬಕ್ರೀದ್ ಹಬ್ಬದ ಶಾಂತಿ ಪಾಲನಾ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುವ ಸಂದರ್ಭದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗಾಗಿ ಜಿಲ್ಲಾಡಳಿತ ಹಾಗೂ ಪೆÇಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿಯುವತಾಗಿ ಆಚರಣೆಗಾಗಿ ಸೂಕ್ತ ಕ್ರಮವಹಿಸಲಾಗುತ್ತಿದೆ ಎಂದರು.

ಬಕ್ರೀದ್ ಹಬ್ಬದ ಶಾಂತಿ ಸಭೆಗೆ ಬಂದ ಎಲ್ಲಾ ಮುಸ್ಲಿಂ ಸಮಾಜದ ಮುಖಂಡರಿಗೆ ಧನ್ಯವಾದಗಳು ನಾನು ಈ ಜಿಲ್ಲೆಗೆ ಬಂದ ನಂತರ ಯಾವುದೇ ಅಹಿತಕರ ಘಟನೆಗಳು ನಡೆದ ವರದಿಗಳು ಈ ಹಿಂದೆ ನಡೆದಿಲ್ಲ ಮುಂದೆಯು ನಡೆಯದಂತೆ ಎಲ್ಲರೂ ಶಾಂತಿ ಹಾಗೂ ಸೌಹಾರ್ದತೆಯಿಂದ ಈ ಹಬ್ಬವನ್ನು ಆಚರಣೆ ಮಾಡಬೇಕು ಮುಂಚಿತವಾಗಿ ತಮಗೆಲ್ಲರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವು ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿಯುತವಾಗಿ ಆಚರಣೆ ಮಾಡಬೇಕು. ಜಿಲ್ಲೆಯಲ್ಲಿ ಯಾವುದೇ ಕೋಮು ಗಲಭೆಗೆ ಅವಕಾಶ ನೀಡದೆ ನಮ್ಮ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಮುಸ್ಲಿಂ ಸಮಾಜದ ಮುಖಂಡರಿಗೆ ಈ ಸಭೆಗೆ ಕರೆದ ಉದ್ದೇಶ ತಮ್ಮ ಇತರರಿಗೂ ಈ ಮಾಹಿತಿ ತಿಳಿಸಬೇಕು. ಪ್ರಾಣಿಬಲಿ, ಅವುಗಳ ಸಾಗಾಟದ ಮೇಲೆ ನಿಗಾವಹಿಸಲು ಜಿಲ್ಲೆಯಲ್ಲಿ 16 ಚೆಕಪೆÇೀಸ್ಟ ತೆರೆಯಲಾಗುವುದು. ಸೋಶಿಯಲ್ ಮೀಡಿಯಾದಲ್ಲಿ ಬರುವ ಯಾವುದೇ ಸುಳ್ಳು ಸುದ್ದಿಯನ್ನು ನಂಬದೆ ಅಂತವುಗಳನ್ನು ನಮ್ಮ ಗಮನಕ್ಕೆ ತರಬೇಕು. ಈಗಾಗಲೇ ರೌಡಿ ಶೀಟರಗಳ ಪರೇಡ್ ಮಾಡಲಾಗಿದೆ. ಜೂನ್ 7ನೇ ತಾರಿಖು ಹಬ್ಬದ ಮುನ್ನಾ ದಿನ ಜೂನ್ 6ನೇ ತಾರಿಖಿನ ರಾತ್ರಿಯಿಂದಲೇ ನಮ್ಮ ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ಭಾರದ ರೀತಿಯಲ್ಲಿ ನೋಡಿಕೊಳ್ಳಲು ಗಸ್ತಿನಲ್ಲಿ ಇರುತ್ತಾರೆ. ಈಗಾಗಲೇ ಜಿಲ್ಲೆಯ ಪೆÇಲೀಸ್ ಠಾಣಾ ಹಂತಗಳಲ್ಲಿ ನಮ್ಮ ಅಧಿಕಾರಿಗಳು ಸಭೆಗಳನ್ನು ಮಾಡಿದ್ದಾರೆ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಬೇಕೆಂದು ಹೇಳಿದರು.

ಮುಸ್ಲಿಂ ಸಮಾಜದ ಮುಖಂಡರು ಮಾತನಾಡಿ, ಬೆಳಿಗ್ಗೆ 9 ರಿಂದ 10 ಗಂಟೆಗೆ ನಮಾಜ್ ಮಾಡುವ ಮುಖಾಂತರ ಹಬ್ಬವನ್ನು ಮುಗಿಸುತ್ತೆವೆ. ಕಳೆದ ವರ್ಷ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿದಂತೆ ಈ ವರ್ಷವು ಅದೇ ರೀತಿಯಲ್ಲಿ ಮಾಡುತ್ತೆವೆ. ಕೊಪ್ಪಳ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಹಬ್ಬದ ದಿನ ಹೆಚ್ಚಿನ ಜನರು ಸೇರುವುದರಿಂದ ನಗರ ಸಭೆ ವತಿಯಿಂದ ಸ್ವಚ್ಚತೆ ಕಾರ್ಯ ಮಾಡುವ ವ್ಯವಸ್ಥೆ ಆಗಬೇಕು. ಸರಕಾರದ ನಿಯಮಗಳ ಪ್ರಕಾರವೇ ಬಕ್ರೀದ್ ಹಬ್ಬವನ್ನು ಆಚರಣೆ ಮಾಡುತ್ತಿದ್ದೆವೆ ಎಂದು ಹೇಳಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆರ್.ಹೆಮಂತ್ ಕುಮಾರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ ಮುಸ್ಲಿಂ ಸಮಾಜದ ಮುಖಂಡರಾದ ಪೀರಾ ಹುಸೇನ್ ಹೊಸಳ್ಳಿ, ಎಸ್.ಬಿ. ಖಾದ್ರಿ, ಸಯ್ಯದ್ ನಾಸಿರುದ್ದೀನ್ ಹುಸೇನಿ, ಮಾನ್ವಿ ಪಾಶಾ, ಆರ್.ಮಹಮ್ಮದ್ ರಫಿ, ಮಹಮ್ಮದ್ ಸಾಬ, ಪಕೃದ್ದೀನ್, ಮರ್ದಾನ್ ಸಾಬ ಗುಡಗುಡಿ, ಮಹಮ್ಮದ್ ಸಾಬ ಕುರಗಲ್, ಬಿಜಿಲಿಸಾಬ ಪಟೇಲ್, ಉಮಾರ್ ಪಾರು ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ಪೋಲಿಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande