ಹುಬ್ಬಳ್ಳಿ, 05 ಜೂನ್ (ಹಿ.ಸ.):
ಆ್ಯಂಕರ್ : ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹುಬ್ಬಳ್ಳಿ, ವಕೀಲರ ಸಂಘ ಹುಬ್ಬಳ್ಳಿ ಮತ್ತು ಅರಣ್ಯ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಆಚರಿಸಲಾಯಿತು.
ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ದಿವಾಣಿ ನ್ಯಾಯಾಧೀಶರಾದ ವಿಶ್ವನಾಥ ಯಮಕನಮರಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ಆರ್.ಎಸ್. ಉಪ್ಪಾರ, 1 ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ರಾಜೀವ ಗೋಳಸಾರ, ವಕೀಲರ ಸಂಘದ ಅಧ್ಯಕ್ಷರಾದ ಎಮ್.ಎಸ್. ಬಾಣದ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಶಿಗ್ಗಾಂವಿ, ನೃಪತುಂಗ ಬೆಟ್ಟದ ಸಂಘದ ಸದಸ್ಯರು, ಅರಣ್ಯ ಇಲಾಖೆಯ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa