ರತ್ಲಂ, 06 ಜೂನ್ (ಹಿ.ಸ.) :
ಆ್ಯಂಕರ್ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ಮಧ್ಯ ಪ್ರದೇಶದ ಅಲೋಟ್ನಲ್ಲಿ ನೂತನವಾಗಿ ನಿರ್ಮಿತ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ-2, ಹಾಸ್ಟೆಲ್ ಹಾಗೂ ಸಿಬ್ಬಂದಿ ವಸತಿ ನಿಲಯಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಾ. ಮೋಹನ್ ಯಾದವ್, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಸಚಿವರು ಹಾಗೂ ಪ್ರಾದೇಶಿಕ ನಾಯಕರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮ ಸಂಜೆ 5 ಗಂಟೆಗೆ ನಡೆಯಲಿದೆ. ನಂತರ ಸಚಿವ ಪ್ರಧಾನ್ ಉಜ್ಜಯಿನಿಗೆ ಪ್ರಯಾಣ ಬೆಳೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa