ದಕ್ಷ ಐಪಿಎಸ್ ಅಧಿಕಾರಿ ದಯಾನಂದ ಮರು ನೇಮಕಕ್ಕೆ ಆಗ್ರಹ
ಬಳ್ಳಾರಿ, 09 ಜೂನ್ (ಹಿ.ಸ.) : ಆ್ಯಂಕರ್ : ದಕ್ಷತೆಗೆ ಖ್ಯಾತರಾಗಿರುವ ಐಪಿಎಸ್ ಅಧಿಕಾರಿ, ಬೆಂಗಳೂರಿನ ನಿಕಟಪೂರ್ವ ಪೆÇಲೀಸ್ ಆಯುಕ್ತ ಬಿ. ದಯಾನಂದರನ್ನು ಅವರನ್ನು ಕರ್ನಾಟಕ ಸರ್ಕಾರ ತಕ್ಷಣವೇ `ಬೆಂಗಳೂರು ಕಮೀಷನರ್ ಹುದ್ದೆಗೆ'' ಮರು ನೇಮಕ ಮಾಡಬೇಕು ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂ
ದಕ್ಷ ಐಪಿಎಸ್ ಅಧಿಕಾರಿ ದಯಾನಂದ ಅವರ ಮರು ನೇಮಕಕ್ಕೆ ಆಗ್ರಹ


ದಕ್ಷ ಐಪಿಎಸ್ ಅಧಿಕಾರಿ ದಯಾನಂದ ಅವರ ಮರು ನೇಮಕಕ್ಕೆ ಆಗ್ರಹ


ಬಳ್ಳಾರಿ, 09 ಜೂನ್ (ಹಿ.ಸ.) :

ಆ್ಯಂಕರ್ : ದಕ್ಷತೆಗೆ ಖ್ಯಾತರಾಗಿರುವ ಐಪಿಎಸ್ ಅಧಿಕಾರಿ, ಬೆಂಗಳೂರಿನ ನಿಕಟಪೂರ್ವ ಪೆÇಲೀಸ್ ಆಯುಕ್ತ ಬಿ. ದಯಾನಂದರನ್ನು ಅವರನ್ನು ಕರ್ನಾಟಕ ಸರ್ಕಾರ ತಕ್ಷಣವೇ `ಬೆಂಗಳೂರು ಕಮೀಷನರ್ ಹುದ್ದೆಗೆ' ಮರು ನೇಮಕ ಮಾಡಬೇಕು ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಆಗ್ರಹಿಸಿದೆ.

ಒಕ್ಕೂಟದ ಬಳ್ಳಾರಿ ಜಿಲ್ಲಾಧ್ಯಕ್ಷ ಡಾ. ಕೆ. ಗಾದಿಲಿಂಗನಗೌಡ ಅವರು, ಒಕ್ಕೂಟ ಸೋಮವಾರ ಏರ್ಪಡಿಸಿದ್ದ ಪ್ರತಿಭಟನೆಯ ನೇತೃತ್ವವಹಿಸಿ, ಕರ್ತವ್ಯಪ್ರಜ್ಞೆ, ಜನಪರವಾದ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದ ಐಪಿಎಸ್ ಅಧಿಕಾರಿಯನ್ನು ಆರ್‍ಸಿಬಿ ಸಂಭ್ರಮೋತ್ಸವದ ಕಾಲ್ತುಳಿತಕ್ಕೆ ಕಾರಣವೆಂದು ಅಮಾನತು ಮಾಡಿರುವುದು ಖಂಡನೀಯ ಎಂದರು.

ಅಹಿಂದ ನಾಯಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾವು ಗೌರವಿಸುತ್ತೇವೆ. ಆದರೆ, ಗೃಹ ಇಲಾಖೆಯ ದಯಾನಂದ್ ಸೇರಿ ಐವರು ಅಧಿಕಾರಿಗಳನ್ನು ಅಮಾನತ್ತು ಮಾಡಿರುವುದು ವ್ಯವಸ್ಥೆಗೆ ವಿರುದ್ಧವಾದ ನಿರ್ಣಯವಾಗಿದೆ. ಸರ್ಕಾರ ತಕ್ಷಣವೇ ಅವರ ಅಮಾನತು ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದರು.

ಜಿಲ್ಲಾ ಒಕ್ಕೂಟದ ಗೌರವಾಧ್ಯಕ್ಷ ಎ. ಮಾನಯ್ಯ ಅವರು, ಈವರೆಗಿನ ಸೇವಾ ಅವಧಿಯಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿರುವ ಐಪಿಎಸ್ ಅಧಿಕಾರಿ ದಯಾನಂದ ಅವರ ಅಮಾನತು ಆದೇಶವನ್ನು ಸರ್ಕಾರ ರದ್ದು ಮಾಡಿ, ತಕ್ಷಣವೇ ಮರು ನೇಮಕ ಆಗಬೇಕು ಎಂದರು.

ಒಕ್ಕೂಟದ ಕಾರ್ಯಾಧ್ಯಕ್ಷ ವಿ.ಎಸ್. ಶಿವಶಂಕರ್ ಅವರು, ಮೂಲತಃ ಅಖಂಡ ಬಳ್ಳಾರಿ ಜಿಲ್ಲೆಯವರಾದ ಐಪಿಎಸ್ ಅಧಿಕಾರಿ ದಯಾನಂದ ಬೆಂಗಳೂರಿನ ಪೆÇಲೀಸ್ ಆಯುಕ್ತರಾದ ನಂತರ ರೌಡಿಗಳನ್ನು ಮಟ್ಟ ಹಾಕಿ, ಭ್ರಷ್ಟಾಚಾರ ನಿಯಂತ್ರಣ ಮಾಡಿ ಸಮಾಜ ಘಾತುಕ ಶಕ್ತಿಗಳಿಗೆ ಕಡಿವಾಣ ಹಾಕಿದ್ದಾರೆ. ಸರ್ಕಾರ ಅವರನ್ನು ತಕ್ಷಣವೇ ಪುನರ್ ನೇಮಕ ಮಾಡಬೇಕು ಎಂದರು.

ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯ ಕೆ. ಹನುಮಂತಪ್ಪ, ಜಿಲ್ಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಮಾಮ್ ಗೋಡೆಕಾರ, ಸಂಘಟನಾ ಕಾರ್ಯದರ್ಶಿ ಸಂಗನಕಲ್ಲು ವಿಜಯ್, ಬಿ. ಶ್ರೀನಿವಾಸ್‍ಮೂರ್ತಿ, ಧನಂಜಯ ಹಮಾಲ್, ಯರಗುಡಿ ಮಲ್ಲಯ್ಯ, ಕೆ.ಕೆ. ಹಾಳ್ ಸತ್ಯನಾರಾಯಣ, ಹಗರಿ ಜನಾರ್ಧನ, ಪುಷ್ಪ, ಕಲಾವತಿ, ಮಲ್ಲೇಶ್ವರಿ, ಗಡ್ಡಂ ತಿಮ್ಮಪ್ಪ, ಬಿ. ಮಲ್ಲಿಕಾರ್ಜುನ, ಅಸುಂಡಿ ಹನುಮೇಶ್, ಅತಾವುಲ್ಲಾ, ಸಂಗನಕಲ್ ಲಿಂಗರಾಜ್, ಸಂಗನಕಲ್ ಜೋಗಿನ ವಿಜಯಕುಮಾರ್, ಹವಂಭಾವಿ ಗಂಗಾಧರ, ಟಿ. ಗಂಗಪ್ಪ, ಶಂಕರ್, ಅಂಜಿನಪ್ಪ ಎಚ್.ಕೆ, ರಮೇಶ್, ಎರಿಸ್ವಾಮಿ, ವೈ. ರವೀಂದ್ರ ನೆಟ್ಟೆಕಲ್ಲಪ್ಪ, ಕುಸುಮ, ರವಿಕುಮಾರ್ ಸಂಗನಕಲ್, ದೇವಿನಗರ ಬೀಮಲಿಂಗ, ಉಮೇಶ್, ಕೆ.ಎರ್ರಿಸ್ವಾಮಿ, ರಾಮು ನಾಯಕ್, ಬೆಳಗಲ್ ಹುಲುಗಪ್ಪ, ಬೆಳಗಲ್ ಜಂಬುನಾಥ, ಮರಿಸ್ವಾಮಿಮಠ ವಸಂತ್ ಕುಮಾರ್, ಎಚ್. ಹಳ್ಳಪ್ಪ, ಸಂಗನಕಲ್ಲು ದಿವಾಕರ್, ಯರಗುಡಿ ರಮೇಶ ಇನ್ನಿತರರು ಪ್ರತಿಭಟನೆಯಲ್ಲಿ

ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande