ಬೆಂಗಳೂರು, 09 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿಬಿ ಕ್ರಿಕೆಟ್ ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಅನ್ನು ರದ್ದುಪಡಿಸುವಂತೆ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಸ್ ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ವಾದ-ಪ್ರತಿವಾದವನ್ನು ಆಲಿಸಿ, ವಿಚಾರಣೆಯನ್ನು ಮಂಗಳವಾರಕ್ಕೆ (ಜೂ. 09) ಮುಂದೂಡಿದೆ.
ನಿಖಿಲ್ ಸೋಸಲೆ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿ, ಸಿಸಿಬಿ ಮೂಲಕ ನಿಖಿಲ್ ಸೋಸಲೆಯನ್ನು ಬಂಧಿಸಲಾಗಿದೆ. ಪ್ರಕರಣ ಸಿಐಡಿಗೆ ತನಿಖೆ ಹಸ್ತಾಂತರವಾದಾಗ ಸಿಸಿಬಿಗೆ ಬಂಧಿಸುವ ಅಧಿಕಾರವಿರಲಿಲ್ಲ. ಕಾರಣಗಳನ್ನು ತಿಳಿಸದೆ ಕಾನೂನುಬಾಹಿರವಾಗಿ ಬಂಧಿಸಲಾಗಿದೆ. ಕಬ್ಬನ್ಪಾರ್ಕ್ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ಪ್ರತಿವಾದ ಮಂಡಿಸಿ ಸೋಸಲೆ ಬೆಂಗಳೂರು ತೊರೆಯುವಾಗ ಬಂಧಿಸಲಾಗಿದೆ. 11 ಅಮಾಯಕರ ಸಾವಿನ ಬಗ್ಗೆ ಅವರು ವಾದಿಸುತ್ತಿಲ್ಲ ಎಂದು ವಾದ ಮಂಡಿಸಿ ಈ ಎಲ್ಲ ಆರೋಪಗಳು ಅರ್ಜಿಯಲ್ಲಿ ಉಲ್ಲೇಖಿಸಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದರು.
ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.
ಇದೇ ವೇಳೆ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಮತ್ತು ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗುವುದು ಬೇಡ ಎಂದು ಸೂಚಿಸಿ ವಿಚಾರಣೆಯನ್ನು ಜೂನ ೧೧ಕ್ಕೆ ಮುಂದೂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa