ಹೃದಯಾಘಾತ ಬಗ್ಗೆ ಆತಂಕ ಬೇಡ : ಡಾ. ಶರಣಪ್ರಕಾಶ್‌ ಪಾಟೀಲ್‌
ಬೆಂಗಳೂರು, 10 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ತಿಳಿಸಿದ್ದಾರ
Patil


ಬೆಂಗಳೂರು, 10 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೃದಯಾಘಾತ ಬಗ್ಗೆ ಜನರು ಆತಂಕ ಪಡಬೇಡಿ. ಮಾಧ್ಯಮದಲ್ಲಿ ಇದರ ಬಗ್ಗೆ ಹೆಚ್ಚು ವೈಭವೀಕರಿಸಲಾಗುತ್ತಿದೆ. ಜನರಿಗೆ ಭೀತಿ ಉಂಟಾಗುವುದು ಸಹಜ. ಆದರೆ ವೈದ್ಯರು ಹಾಗೂ ಇಲಾಖೆಯ ಅಧಿಕಾರಿಗಳು ನೀಡುವ ಸಲಹೆಗಳನ್ನು ಪಾಲಿಸಿ ಎಂದು ತಿಳಿಸಿದರು.

ಸಾರ್ವಜನಿಕರು ನಿಯಮಿತ ಆಹಾರ, ಪೌಷ್ಟಿಕಯುಕ್ತ ಆಹಾರ, ವ್ಯಾಯಾಮ ಹಾಗೂ ಯೋಗ ಹಾಗೂ ಇತರೆ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಿ. ಜೀವನ ಶೈಲಿಯನ್ನು ಆದಷ್ಟು ಬಳಸಿಕೊಳ್ಳಿ. ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇದೆ ಎಂದು ಮಾಹಿತಿ ನೀಡಿದರು.

ಆದಷ್ಟು ಜಂಕ್‌ ಫುಡ್‌, ದುರಭ್ಯಾಸಗಳನ್ನು ಮಾಡಬಾರದು. ಕರಿದ ಪದಾರ್ಥಗಳ ಸೇವನೆ ನಿಯಂತ್ರಣ ಮಾಡಿಕೊಳ್ಳುವ ಮೂಲಕ ಆರೋಗ್ಯ ಸಂರಕ್ಷಿಸಕೊಳ್ಳಬಹುದು. ಜನರು ಎಚ್ಚರದಿಂದಿರಿ, ಸುರಕ್ಷಿತವಾಗಿರಿ, ಆತಂಕದಿಂದ ದೂರವಿರಿ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಸಲಹೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande