ವಿಜಯಪುರ, 10 ಜುಲೈ (ಹಿ.ಸ.) :
ಆ್ಯಂಕರ್ : ಅಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಶಂಭೇವಾಡ ಗ್ರಾಮದ ಬಳಿ ನಡೆದಿದೆ.
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು 6 ಟಿಪ್ಪರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅನಧಿಕೃತ ಮರಳು ಸಾಗಾಟದ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಲಾಗಿದೆ.
ಆಲಮೇಲ ಠಾಣೆಯ ಪಿಎಸ್ಐ ಅರವಿಂದ ಅಂಗಡಿ, ಸಿಪಿಐ ನಾನಗೌಡ ಅವರ ನೇತೃತ್ವದ ತಂಡದಿಂದ ದಾಳಿ ನಡೆದಿದೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande