ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ದೌರ್ಜನ್ಯ ವಿರೋಧಿ ಸಮಿತಿಯ ಸಭೆ ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅಧ್ಯಕ್ಷತೆಯಲ್ಲಿ ನಡೆಯಿತು.


ಕೋಲಾರ, ಜುಲೈ ೧೦ (ಹಿ.ಸ) :

ಆ್ಯಂಕರ್ : ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬAಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಂತಹ ಮಹತ್ತರ ಸಭೆಗೆ ಸಮರ್ಪಕ ಮಾಹಿತಿ ಒದಗಿಸದಿದ್ದಲ್ಲಿ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಸೂಚಿಸಿದರು.

ಕೋಲಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ನಡೆದ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಂಬ0ಧ ಇರುವ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕು ಹಾಗೂ ಆ ಸಮಸ್ಯೆ ಸಂಬ0ಧ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು. ತಾತ್ಸಾರದ ಮನೋಭಾವನೆಯಿಂದ ಕೆಲಸ ನಿರ್ವಹಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬ0ದಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿ ಸದಸ್ಯರನ್ನು ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ ಬಿ. ನಿಖಿಲ್ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು.

ಕೆಲವು ವಿದ್ಯಾರ್ಥಿನಿಲಯಗಳ ಜಮೀನು ಒತ್ತುವರಿಯಾಗಿರುವುದಾಗಿ ಅದನ್ನು ತಕ್ಷಣವೇ ತೆರವುಗೊಳಿಸಲು ಕ್ರಮವಹಿಸಲು ಉಸ್ತುವಾರಿ ಸಮಿತಿ ಸದಸ್ಯರ ಎಂ ಮುನಿರಾಜು ಅವರು ಆಗ್ರಹಿಸಿದರು.

ಸುಗಟೂರಿನ ವಿದ್ಯಾರ್ಥಿನಿಲಯಗಳಲ್ಲಿ ವಾರಾಂತ್ಯಗಳಲ್ಲಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಲಯಪಾಲಕರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಸಂಬ0ಧಿತ ಅಧಿಕಾರಿ ತಿಳಿಸಿದರು.

ವಿವಿಧ ಇಲಾಖೆಯಲ್ಲಿ ಜಾರಿ ಇರುವ ಎಸ್‌ಸಿಪಿ, ಟಿ.ಎಸ್.ಪಿ ಯೋಜನೆಗಳ ಕುರಿತು ಹೆಚ್ಚು ಅರಿವು ಮುಡಿಸಬೇಕು ಎಂದು ಸಮಿತಿ ಸದಸ್ಯರೊಬ್ಬರು ಒತ್ತಾಯಿಸಿದರು.

ಎಲ್ಲಾ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಎಸ್ ಸಿ ಎಸ್ ಟಿ ಪಂಗಡಗಳ ಕುಂದು ಕೊರತೆ ಸಭೆ ನಡೆಸಲು ಅವರು ಸಲಹೆ ನೀಡಿದರು. ಎಲ್ಲ ಇಲಾಖೆಗಳವರು ಸಮನ್ವಯ ಸಾಧಿಸಿ ಜಿಲ್ಲಾ ಮಟ್ಟದ ಮಾಹಿತಿ ಕೈಪಿಡಿ ಪ್ರಕಟಿಸಲು ಕ್ರಮ ವಹಿಸಲು ಸಭೆಯಲ್ಲಿ ಸೂಚಿಸಲಾಯಿತು.

ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳಿಗೆ ಐ ಎ ಎಸ್, ಐ ಪಿ ಎಸ್ ಕೋಚಿಂಗ್ ಸೆಂಟರ್ ಪ್ರಾರಂಭಿಸಲು ಸ್ಥಳ ಗುರುತಿಸಿಕೊಡಲು ಸದಸ್ಯರು ಕೋರಿದರು. ಇದಕ್ಕಾಗಿ ಹೊಳಲಿ ಗ್ರಾಮದಲ್ಲಿ ೯.೦೦ಎಕರೆ ಜಾಗ ಗುರುತಿಸಲಾಗಿದ್ದು, ತಂತಿ ಬೇಲಿ ಹಾಕಲಾಗಿದೆ ಎಂದು ಸಂಬ0ಧಿತ ಅಧಿಕಾರಿಗಳು ಸಭೆಗೆ ತಿಳಿಸಿದರು. ಈ ಜಾಗದಲ್ಲಿ ಸಂಶೋಧನಾ ಕೇಂದ್ರ, ವಾಚನಾಲಯ, ಅಧ್ಯಯನ ಕೇಂದ್ರ, ಕೌಶಲ್ಯ ಮತ್ತು ಜ್ಞಾನ ಕೇಂದ್ರ ಸ್ಥಾಪಿಸಲು ಅಧ್ಯಯನ ನಡೆಸಿ ಮುಂದಿನ ಸಭೆಗೆ ವರದಿ ನೀಡಲು ಜಿಲ್ಲಾಧಿಕಾರಿ ಗಳು ಸೂಚಿಸಿದರು.

ಮತ್ತೊರ್ವ ಸದಸ್ಯರಾದ ಎಂ. ಮಂಜುನಾಥ್ ಅವರು ಮಾತನಾಡಿ ಕಸಬಾ ತಾಲ್ಲೂಕಿನ ಅಣ್ಣೆಹಳ್ಳಿ ಗ್ರಾಮಪಂಚಾಯಿತಿಯ ಗ್ರಾಮವೊಂದರಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ರಸ್ತೆಗೆ ಅಡ್ಡಲಾಗಿ ಕಸ ಸಂಗ್ರಹಣೆ ಆಗುತ್ತಿದ್ದು, ಅದರಿಂದ ಉಂಟಾಗುವ ದುರ್ವಾಸನೆಯಿಂದಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ಸಭೆಗೆ ತಿಳಿಸಿದರು. ಅದಕ್ಕೆ ಸಂಬ0ಧಿತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಕ್ಷಣವೇ ಕ್ರಮವಹಿಸಿ ಆ ಜಾಗದಲ್ಲಿ ಪೈಪ್‌ಲೈನ್ ಅಳವಡಿಸಲು ಕ್ರಮ ಕೈಗೊಂಡು ಅನುಪಾಲನಾ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಗಡಿ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಳು ಆಗ್ರಹಿಸಿದರು. ಶ್ರೀನಿವಾಸಪುರ ತಾಲ್ಲೂಕಿನ ಲ್ಲಿ ಅಂಬಯುಲೆನ್ಸ್ ಕೊರತೆ ಇದೆ ಎಂದು ಸದಸ್ಯರು ದೂರಿದರು ಅದಕ್ಕೆ, ತಕ್ಷಣವೇ ಸ್ಪಂದಿಸುವ0ತೆ ಜಿಲ್ಲಾ ಆರೋಗ್ಯಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಾಕಿತು ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್ ಅವರು ಅನುಸೂಚಿತ ಜಾತಿ, ಅನುಸೂಚಿತ ಪಂಗಡ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆ ನಿರ್ವಹಿಸಿದರು.

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ,ಕೆ ಜಿ ಎಫ್ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಅಪರ ಜಿಲ್ಲಾಧಿಕಾರಿ ಮಂಗಳ, ಉಪವಿಭಾಗಾಧಿಕಾರಿ ಡಾ. ಮೈತ್ರಿ, ಎಲ್ಲಾ ತಹಸೀಲ್ದಾರ್, ವಿವಿಧ ಇಲಾಖೆಯ ಮುಖ್ಯಸ್ಥರು ಹಾಗೂ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಚಿತ್ರ : ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ದೌರ್ಜನ್ಯ ವಿರೋಧಿ ಸಮಿತಿಯ ಸಭೆ ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅಧ್ಯಕ್ಷತೆಯಲ್ಲಿ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande