ಬಳ್ಳಾರಿ, 14 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಅಲ್ಲೀಪುರ - ಬಳ್ಳಾರಿ ಉತ್ತರ ಮಾರ್ಗದ ಎಲ್ಐಎಲ್ಓ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೊಂಡಿರುವುದರಿಂದ, 110/11ಕೆ.ವಿ ಯ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಜು.16 ರಂದು ಬೆಳಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಫೀಡರ್ಗಳು ಮತ್ತು 33/11ಕೆ.ವಿ ಗುಡದೂರು ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜು ಎಲ್ಲಾ 11ಕೆ.ವಿ. ಫೀಡರ್ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್