ಕೋಲಾರ, ೧೬ ಜುಲೈ (ಹಿ.ಸ) :
ಆ್ಯಂಕರ್ : ಸಾರ್ವಜನಿಕರು ಸೇರಿದಂತೆ ಹಾಸ್ಟೆಲ್ ವಿದ್ಯಾರ್ಥಿಗಳು ಸಮಸ್ಯೆಗಳು ಹೇಳಿಕೊಂಡಾಗ ಅಧಿಕಾರಿಗಳು ಸ್ಪಂದಿಸಬೇಕು ಅದಕ್ಕಾಗಿ ಸರ್ಕಾರವು ನಿಮ್ಮನ್ನು ನೇಮಕ ಮಾಡಿರೋದು ನಿರ್ಲಕ್ಷ್ಯ ವಹಿಸಿದರೆ ಕ್ರಮ ವಹಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ಕೋಲಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳ ಊಟದಲ್ಲಿ ಗುಣಮಟ್ಟ ಬೆಳಗ್ಗೆ ಬಿಸಿನೀರು ಮೂಲಭೂತ ಸೌಕರ್ಯಗಳ ಬಗ್ಗೆ ದೂರುಗಳು ಬಂದಿವೆ ಕೂಡಲೇ ಸರಿಪಡಿಸಬೇಕು ಆಹಾರ ವಿತರಣೆಯಲ್ಲಿ ವ್ಯತ್ಯಾಸವಾದರೆ ಸಂಬAಧಿಸಿದ ಅಧಿಕಾರಿ ಗುತ್ತಿಗೆದಾರನ ವಿರುದ್ದ ಕ್ರಮ ವಹಿಸಲಾಗುತ್ತದೆ ಹಾಸ್ಟೆಲ್ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ಒದಗಿಸಬೇಕು. ಮಕ್ಕಳಿಂದಾಗಲಿ, ಪೋಷಕರಿಂದಾಗಲಿ ದೂರುಗಳು ಬರಬಾರದು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ತೋಟಗಾರಿಕೆ ಮತ್ತು ಕೃಷಿ ಇಲಾಖೆಗಳಿಂದ ರೈತರಿಗೆ ಸಾಕಷ್ಟು ಯೋಜನೆಗಳಿವೆ. ಈ ಬಗ್ಗೆ ರೈತರಿಗೆ ಮೊದಲು ಮಾಹಿತಿ ಕೊಡಬೇಕು ನೈಜ ರೈತರನ್ನು ಗುರುತಿಸಿ ಅವಕಾಶ ಕಲ್ಪಿಸಬೇಕು ರೈತರಿಗೆ ಯಂತ್ರೋಪಕರಣಗಳು ಸೇರಿದಂತೆ ಸಹಾಯಧನವನ್ನು ಪಡೆಯಲು ಒಂದಿಷ್ಟು ಗ್ಯಾಂಗ್ ಹುಟ್ಟಿಕೊಂಡಿದೆ ಬರುವ ಅಷ್ಟು ಸೌಲಭ್ಯ ಅವರಿಗೆ ಹೆಸರು ಮಾತ್ರ ಬಡ ರೈತನದ್ದು ಆಗಿರುತ್ತದೆ ಇದಕ್ಕೆ ಅಧಿಕಾರಿಗಳ ಬೆಂಬಲ ಇದೆ ಕೂಡಲೇ ಈ ಪ್ರವೃತ್ತಿ ನಿಲ್ಲಬೇಕು ಇಲ್ಲದೇ ಹೋದರೆ ನಾವೇ ನೇರವಾಗಿ ಅ ಗ್ಯಾಂಗ್ ನ ತೋರಿಸಬೇಕಾಗುತ್ತದೆ ಎಂದರು
ರೈತರು ಕೃಷಿಗೆ ಸಂಬAಧಿಸಿದ ಸಮಸ್ಯೆಗಳ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಯಾರಾದರೂ ತಿಳಿಸಿದರೆ ಸ್ಪಂದಿಸುವುದಿಲ್ಲ ಎಂಬ ದೂರುಗಳು ಹೆಚ್ಚು ಕೇಳಿ ಬಂದಿದೆ ಇದುವರೆಗೂ ರೈತರ ಸಮಸ್ಯೆಗಳ ಬಗ್ಗೆ ಎಷ್ಟು ಅರ್ಜಿಗಳು ಬಂದಿದೆ ಎಷ್ಟು ಪರಿಹಾರವಾಗಿವೆ ಎಷ್ಟು ಜನ ಸೌಲಭ್ಯಗಳನ್ನು ಪಡೆದಿದ್ದಾರೆ ಎಂಬುದರ ಬಗ್ಗೆ ಪಲಾನುಭವಿಗಳ ಪಟ್ಟಿಯನ್ನು ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಮಳೆಗಾಲ ಪ್ರಾರಂಭವಾಗಿದೆ ಬಿತ್ತನೆ ಬೀಜ ಗೊಬ್ಬರ ಕೊರತೆ ಉಂಟಾಗದAತೆ ಎಚ್ಚರಿಕೆ ವಹಿಸಬೇಕು ಎಂದರು.
ಆರೋಗ್ಯ ಇಲಾಖೆಯಲ್ಲಿ ಸರ್ಕಾರದಿಂದ ಆಗಬೇಕಾದ ಕೆಲಸಗಳ ಬಗ್ಗೆ ಗಮನಕ್ಕೆ ತನ್ನಿ ಕೆಲವು ಆಸ್ಪತ್ರೆಯಲ್ಲಿ ಔಷಧೀಗಳಿಗೆ ಚೀಟಿ ಕೊಟ್ಟು ಹೊರಗಡೆ ಕಳಸುತ್ತಾರೆ ಮುಂದೆ ಇಂತಹುದೇ ಯಾವುದೇ ದೂರುಗಳು ಬರಬಾರದು ಈಗಾಗಲೇ ಹೋಬಳಿ ಕೇಂದ್ರಗಳಲ್ಲಿ ಹೊಸ ಕಟ್ಟಡಗಳು ಆದಷ್ಟು ಬೇಗ ಕಾಮಗಾರಿ ಮುಗಿಸಿ ಸೇವೆಗೆ ಲಭ್ಯವಿರಬೇಕು ಸಿಬ್ಬಂದಿ ಕೊರತೆ ಯಾಗಬಾರದು ಎಂದು ತಾಲೂಕು ಆರೋಗ್ಯ ಅಧಿಕಾರಿ ನಾರಾಯಣಸ್ವಾಮಿಗೆ ಸೂಚನೆ ನೀಡಿದರು
ಯಾವುದೇ ಕಾಮಗಾರಿಯಾಗಲಿ ಪೂರ್ಣಗೊಂಡ ನಂತರವೇ ಹಣ ಬಿಡುಗಡೆ ಮಾಡಬೇಕು ಜಲಜೀವನ್ ಮಿಷನ್ ವತಿಯಿಂದ ಆದಷ್ಟು ಬೇಗ ಕೆಲಸ ಮುಗಿಸಬೇಕು ಮೀನುಗಾರಿಕೆ ಇಲಾಖೆ ವತಿಯಿಂದ ಮನೆಗಳು ಸೇರಿದಂತೆ ಪೋತ್ಸಾಹಧನ ಸಿಗುತ್ತವೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ನಗರ ಸಾರಿಗೆಯನ್ನು ಮಾಲೂರು ಮಾರ್ಗದ ಮಂಗಸAದ್ರ ಪಿಜಿ ಕೇಂದ್ರ ಹಾಗೂ ಬಂಗಾರಪೇಟೆ ರಸ್ತೆಯ ದಿಂಬ ವರಗೂ ವಿಸ್ತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ವೇಮಗಲ್ ಮುನಿಯಪ್ಪ, ತಹಶಿಲ್ದಾರ್ ನಯನ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು
ಚಿತ್ರ : ಕೋಲಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್