ಮನೆ-ಮನೆಗೆ ಪೊಲೀಸ್' : ವಿನೂತನ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು, 18 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ''ಮನೆ-ಮನೆಗೆ ಪೊಲೀಸ್'' ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿ ಬೆಂಗಳೂರು ಪೊಲೀಸರು ಹೊರತಂದಿರುವ ''ಮನೆ ಮನೆಗೆ ಪ
Police


ಬೆಂಗಳೂರು, 18 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಂಡಿರುವ 'ಮನೆ-ಮನೆಗೆ ಪೊಲೀಸ್' ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿ ಬೆಂಗಳೂರು ಪೊಲೀಸರು ಹೊರತಂದಿರುವ 'ಮನೆ ಮನೆಗೆ ಪೊಲೀಸ್' ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ಸರ್ಕಾರವು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ, ಸಮಾಜದಲ್ಲಿ ನಿರ್ಭಯ ವಾತಾವರಣ ನಿರ್ಮಾಣ ಮಾಡಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಮನ್ವಯತೆ ಅತ್ಯಗತ್ಯ ಎಂದರು.

ದೇಶದಲ್ಲಿ ಪ್ರಥಮ ಬಾರಿಗೆ ಮನೆ ಮನೆಗೆ ಪೊಲೀಸ್ ವಿನೂತನವಾದ ಕಾರ್ಯಕ್ರಮ ಮಾಡಲಾಗುತ್ತಿದೆ. ಇನ್ನು ಮುಂದೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ರಾಜ್ಯದಾದ್ಯಂತ ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ದೂರುಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಿದ್ದಾರೆ. ನಿಮಗೆ ಯಾರಿಂದಲೂ ತೊಂದರೆ, ದೌರ್ಜನ್ಯ, ಮೋಸ ಹೋಗಿದ್ದರೆ, ನೆರೆಹೊರೆಯಲ್ಲಿ ಕಂಡುಬರುವ ಕಾನೂನು ಬಾಹಿರ ಚಟುವಟಿಕೆಗಳ ಕುರಿತು ಯಾವುದೇ ಆತಂಕವಿಲ್ಲದೆ ಮುಕ್ತ ಮನಸ್ಸಿನೊಂದಿಗೆ ನಿಮ್ಮ ಸಮಸ್ಯೆಗಳನ್ನು ಪೊಲೀಸರೊಂದಿಗೆ ಹಂಚಿಕೊಳ್ಳಿ ಎಂದು ಕರೆ ನೀಡಿದರು.

ಸಾರ್ವಜನಿಕರ ಸಹಕಾರವಿದ್ದರೆ ಎಂತಹ ಅಪರಾಧಗಳನ್ನಾದರೂ ತಡೆಗಟ್ಟಬಹುದು. ಅಪರಾಧಗಳಾಗುವ ಮುನ್ನವೇ ಅಪರಾಧಗಳನ್ನು ಮಟ್ಟ ಹಾಕಲು ಪೊಲೀಸರಿಗೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ. ಇದನ್ನು ಸರ್ಕಾರ ಅರಿತುಕೊಂಡೆ 'ಮನೆ ಮನೆಗೆ ಪೊಲೀಸ್' ಅರ್ಥಪೂರ್ಣ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ರಾಜ್ಯದ ಎಲ್ಲ ನಾಗರಿಕರು ಈ ಕಾರ್ಯಕ್ರಮಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande