ಸಿರವಾರ: ಕ್ರಿಮಿನಾಶಕ ಸಿಂಪಡಿಸಿದ ಚವಳೆಕಾಯಿ ಸೇವನೆ : ತಂದೆ ಮಕ್ಕಳು ಸಾವು
ರಾಯಚೂರು, 22 ಜುಲೈ (ಹಿ.ಸ.) : ಆ್ಯಂಕರ್ : ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದ ಚವಳೆಕಾಯಿ ಸೇವಿಸಿ ಕುಟುಂಬದ ಆರು ಜನ ಅಸ್ವಸ್ಥರಾಗಿದ್ದರು. ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದು ನಾಲ್ವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ .
ಸಿರವಾರ: ಕ್ರಿಮಿನಾಶಕ ಸಿಂಪಡಿಸಿದ ಚವಳೆಕಾಯಿ ಸೇವನೆ : ಇಬ್ಬರ ಸಾವು..


ರಾಯಚೂರು, 22 ಜುಲೈ (ಹಿ.ಸ.) :

ಆ್ಯಂಕರ್ : ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದ ಚವಳೆಕಾಯಿ ಸೇವಿಸಿ ಕುಟುಂಬದ ಆರು ಜನ ಅಸ್ವಸ್ಥರಾಗಿದ್ದರು. ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದು ನಾಲ್ವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ .

ಪತ್ನಿ ಪದ್ಮಾ ಹಾಗೂ ಇಬ್ಬರು ಮಕ್ಕಳಾದ ಕೃಷ್ಣ, ಚೈತ್ರಾ ರನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಕುಟುಂಬದ ಎಲ್ಲರಿಗೂ ರಾತ್ರಿ ಎರಡು ಗಂಟೆ ವೇಳೆಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಅಕ್ಕ ಪಕ್ಕದ ಮನೆಯವರನ್ನು‌ ಸಹಾಯಕ್ಕೆ ಕರೆದಿದ್ದಾರೆ. ತಕ್ಷಣವೇ ಕುಟುಂಬದ ಎಲ್ಲಾ ಸದಸ್ಯರನ್ನು ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸುವ ಹೊತ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ರಮೇಶ ನಾಯಕ (38), ಇವರ ಪುತ್ರಿಯರಾದ ನಾಗಮ್ಮ (8) ಮೃತಪಟ್ಟಿದ್ದಾರೆ .

ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ರಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ವೇಳೆ 6 ವರ್ಷದ ದೀಪು ಮಾರ್ಗ ಮಧ್ಯ ಅಸುನೀಗಿದ್ದಾಳೆ.

ರಮೇಶ ನಾಯಕ ಅವರು ತಮ್ಮ ಜಮೀನಿನಲ್ಲಿ ಹತ್ತಿ ಬೆಳೆದಿದ್ದು ಬದುವಿನಲ್ಲಿ ಮನೆ ಬಳಕೆಗಾಗಿ ತರಕಾರಿ ಬೆಳೆಸಿದ್ದಾರೆ, ಶನಿವಾರ ಚವಳೆಕಾಯಿಗೆ ಕೀಟ ನಿಯಂತ್ರಣಕ್ಕಾಗಿ ಕ್ರಿಮಿನಾಶಕ ಸಿಂಪಡಿಸಿ ತಳದಲ್ಲಿ ಗುಳಿಗೆಗಳನ್ನು ಇಟ್ಟಿದ್ದಾರೆ.

ಸೋಮವಾರ ಹೊಲದಲ್ಲಿನ ಚವಳೆಕಾಯಿ ತಂದು ಪಲ್ಯ ತಯಾರಿಸಿ ರಾತ್ರಿ ಊಟ ಮಾಡಿದ ನಂತರ ವಾಕರಿಕೆ, ವಾಂತಿ, ಬೇಧಿ ಕಾಣಿಸಿಕೊಂಡಿದೆ, ಚಿಕಿತ್ಸೆಗಾಗಿ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆಗೆ ಸ್ಪಂದಿಸದೆ ಮೂವರು ಕೊನೆಯುಸಿರೆಳೆದಿದ್ದಾರೆ.

ಕವಿತಾಳ ಠಾಣೆ ಪಿಎಸ್‍ಐ ವೆಂಕಟೇಶ ನಾಯಕ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande