ನವದೆಹಲಿ, 22 ಜುಲೈ (ಹಿ.ಸ.) :
ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಕಾಂಗ್ರೆಸ್ ನಾಯಕಿ ಮತ್ತು ಲೋಕ ಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ವಾದ್ರಾ ಇದು ಸಂವಿಧಾನದ ಹತ್ಯೆ ಎಂದಿದ್ದು, ತಕ್ಷಣವೇ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕ್ರಿಯೆ ಸಂಪೂರ್ಣವಾಗಿ ತಪ್ಪಾಗಿದೆ ಮತ್ತು ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದೆ ಎಂದರು.
ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ಇಮ್ರಾನ್ ಪ್ರತಾಪ್ಗಢಿ ಕೂಡ ಈ ಕುರಿತಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಇದು ದೇಶದಾದ್ಯಂತ ಮತಚಲಾವನೆ ಹಕ್ಕನ್ನು ಕಬಳಿಸುವ ಚಾಳಿಯೆಂದು ಆರೋಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa