ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಮನವಿ
ಬಳ್ಳಾರಿ, 25 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹ ಪದವೀಧರರು, ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾ ಪದವೀಧರರು 2025-26ನೇ ಸಾಲಿನ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್
ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಮನವಿ


ಬಳ್ಳಾರಿ, 25 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹ ಪದವೀಧರರು, ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾ ಪದವೀಧರರು 2025-26ನೇ ಸಾಲಿನ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 07 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆಯಡಿ ಪದವೀಧರರಿಗೆ ರೂ.3000 ಮತ್ತು ಡಿಪ್ಲೋಮಾ ಪದವೀಧರರಿಗೆ ರೂ.1500 ನೀಡಲಾಗುತ್ತದೆ. 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‍ಲೈನ್ ಸೇವಾಸಿಂಧು ಪೋರ್ಟಲ್, ಕರ್ನಾಟಕ-1, ಗ್ರಾಮ -1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು.

ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ/180 ದಿನಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರಾಗಿರಬೇಕು.

ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾ ಅಧ್ಯಯನ ಮಾಡಿದವರು).

ಬೇಕಾದ ದಾಖಲೆ :

ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಜೋಡಣೆಗೊಂಡ ಮೊಬೈಲ್ ಸಂಖ್ಯೆ.

ಪ್ರತಿ ತಿಂಗಳು 25 ರೊಳಗಾಗಿ ಸ್ವಯಂ ದೃಢೀಕೃತ ನಿರುದ್ಯೋಗಿ ಪ್ರಮಾಣ ಪತ್ರವನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿದೆ. ನೋಂದಾಯಿಸಿಕೊಳ್ಳಲು ಸೇವಾ ಸಿಂಧು ವೆಬ್ ಪೋರ್ಟಲ್ ವಿಳಾಸ: https://sevasindhugs.karnataka.gov.in ಗೆ ಭೇಟಿ ನೀಡಬೇಕು.

ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಸಮಸ್ಯೆಗಳಾದಲ್ಲಿ ಸಹಾಯವಾಣಿ ಸಂಖ್ಯೆ ದೂ.18005999918, 18005997154 ಗೆ ಕರೆ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 8277000619, 9900827768, 6360408094, 8861866752 ಹಾಗೂ ಸಂಬಂಧಿಸಿದ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande