ದಾವಣಗೆರೆ, 27 ಜುಲೈ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವಿನ ಪ್ರಕರಣಗಳ ಕುರಿತು ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ನೀಡಿದ್ದು, ಜುಲೈ 26ರಿಂದ ತನಿಖೆ ಆರಂಭವಾಗಿದೆ. ತನಿಖಾ ವರದಿ ಹೊರಬರುವವರೆಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಸಾರ್ವಜನಿಕರ ಒತ್ತಾಯದ ಮೇರೆಗೆ ತನಿಖೆಗೆ ಸರಕಾರ ಎಸ್ ಐಟಿ ರಚಿಸಿದೆ ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ ತನಿಖಾ ವರದಿ ಬರುವವರೆಗೂ ಯಾವುದೇ ಮಾಹಿತಿ ಬಹಿರಂಗ ಪಡಿಸಿಲು ಸಾಧ್ಯವಿಲ್ಲ, ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa