ಹೊಸಪೇಟೆ ಬಳಿ ಅಪಘಾತ : ಬಾಗಲಕೋಟೆಯ ದಂಪತಿ ಸಾವು, 3 ಮಕ್ಕಳು ಗಂಭೀರ
ಹೊಸಪೇಟೆ, 04 ಜುಲೈ (ಹಿ.ಸ.) : ಆ್ಯಂಕರ್ : ವಿಜಯನಗರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಮೂವರು ಮಕ್ಕಳು ತೀವ್ರ ಗಾಯಗೊಂಡಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ. ಮರಿಯಮ್ಮನಹಳ್ಳಿಯ ಹೊರವಲಯದಲ್ಲಿರುವ ಕೆಪಿಟಿಸಿಎಲ್ ಕಚೇರಿ ಮುಂಭಾಗದ ರ
ಹೊಸಪೇಟೆ ಬಳಿ ಅಪಘಾತ: ಬಾಗಲಕೋಟೆಯ ದಂಪತಿ ಸಾವು, 3 ಮಕ್ಕಳು ಗಂಭೀರ.


ಹೊಸಪೇಟೆ, 04 ಜುಲೈ (ಹಿ.ಸ.) :

ಆ್ಯಂಕರ್ : ವಿಜಯನಗರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಮೂವರು ಮಕ್ಕಳು ತೀವ್ರ ಗಾಯಗೊಂಡಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.

ಮರಿಯಮ್ಮನಹಳ್ಳಿಯ ಹೊರವಲಯದಲ್ಲಿರುವ ಕೆಪಿಟಿಸಿಎಲ್ ಕಚೇರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಈ ಅಪಘಾತವು ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರು ಬಾಗಲಕೋಟೆ ಜಿಲ್ಲೆಯ ಚೆಟ್ನಿಹಾಳು ಗ್ರಾಮದವರಾಗಿದ್ದಾರೆ. ಮುತ್ತಪ್ಪ ಪೂಜಾರ್ (35) ಹಾಗೂ ಅವರ ಪತ್ನಿ ರೇಣುಕಾ (30) ಎಂದು ತಿಳಿಸಿದ್ದಾರೆ. .

ಮುತ್ತಪ್ಪ ಪೂಜಾರ್ ಅವರು ಬೆಂಗಳೂರಿನಲ್ಲಿ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು, ಮೊಹರಂ ಹಬ್ಬದ ನಿಮಿತ್ತ ಕುಟುಂಬದೊಂದಿಗೆ ತಮ್ಮ ಸ್ವಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮೃತ ದಂಪತಿಯ ಮಕ್ಕಳಾದ ಅನುಶ್ರೀ (9), ರೂಪಶ್ರೀ (6) ಹಾಗೂ ಖುಷಿ (4) ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ರವಾನಿಸಲಾಗಿದೆ.

ಅಪಘಾತದ ತೀವ್ರತೆ ಭೀಕರ: ಬೃಹತ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ನಂತರ ಅದನ್ನು ಸುಮಾರು ಅರ್ಧ ಕಿಲೋಮೀಟರ್ ದೂರದವರೆಗೂ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ವಿಜಯನಗರ ಜಿಲ್ಲಾ ವರಿಷ್ಠಾಧಿಕಾರಿ ಡಾ. ಶ್ರೀಹರಿಬಾಬು ಬಿ.ಎಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಮರಿಯಮ್ಮನಹಳ್ಳಿ ಹಳ್ಳಿ ಠಾಣೆಯಲ್ಲಿ ದಾಖಲಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande