ರಾಯಚೂರು, 04 ಜುಲೈ (ಹಿ.ಸ.) :
ಆ್ಯಂಕರ್ : ಮೈಸೂರಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ನಡೆಸಲಾಗುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಕೇಂದ್ರದಲ್ಲಿ ಅಂಧ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳಲ್ಲಿ, ವಿಕಲಚೇತನರ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ, ಸಿಬಿಎಸ್ಸಿ ಶಾಲೆಗಳಲ್ಲಿ ಮತ್ತು ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು ಜೊತೆಗೆ ಜಿಲ್ಲಾ ಆಸ್ಪತ್ರೆಗಳಲ್ಲಿ ಅಥವಾ ರಾಷ್ಟ್ರೀಯ ಸಂಸ್ಥೆಗಳು ಹಾಗೂ ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಬಹುದು, ಮಾತಿನ ತರಬೇತಿ ಘಟಕಗಳಲ್ಲೂ ಕಾರ್ಯ ನಿರ್ವಹಿಸಬಹುದಾಗಿದೆ.
ಈ ವಿಶೇಷ ಡಿ.ಎಡ್ ಸಾಮಾನ್ಯ ಡಿ.ಇಡ್ ಗೆ ಸಮಾನಾಂತರವಾಗಿವೆ. ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.50 (ಎಸ್.ಸಿ. ಎಸ್.ಟಿ. ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ವೆಬ್ಸೈಟ್ ವಿಳಾಸ: https://nber-rehabcouncil.gov.in ನಲ್ಲಿ ಜುಲೈ 12 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರದ ಉಪ ನಿರ್ದೇಶಕರು (ತರಬೇತಿ) ಅವರ ಕಚೇರಿ, ಪುಲಕೇಶಿ ರಸ್ತೆ, ತಿಲಕ್ನಗರ, ಮೈಸೂರು-570001, ದೂರವಾಣಿ ಸಂಖ್ಯೆ: 0821-2491600 ತರಬೇತಿ ಸಂಯೋಜಕರು: ಆಶಾ ವಿ. ಹಿರೇಮಠ್: 9113561620, ಟಿ.ಡಿ.ಮಂಜುನಾಥ: 9686762378ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್