ಗದಗ, 08 ಜುಲೈ (ಹಿ.ಸ.) :
ಆ್ಯಂಕರ್ : ಗದಗ ತಾಲೂಕಿನ ಹುಲಕೋಟಿಯ ಕೆ.ಎಚ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಹಾಗೂ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಹಯೋಗದಲ್ಲಿ, ಗದಗ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗ ಇವರ ಸಹಕಾರ ಹಾಗೂ ಎಚ್.ಕೆ.ಪಾಟೀಲ ಸೇವಾ ತಂಡದ ಸಹಾಯದಿಂದ ಒಟ್ಟು 21 ಜನ ಫಲಾನುಭವಿಗಳಿಗೆ ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರ ಮೋತಿ ಬಿಂದು ಚಿಕಿತ್ಸೆಯನ್ನು ಮಾಡಲಾಗಿದೆ.
ಹುಲಕೋಟಿಯ ಕೆ.ಎಚ್. ಪಾಟೀಲ ಆಸ್ಪತ್ರೆಯಲ್ಲಿ ನಡೆಸಲಾಯಿತು. ಸಂಸ್ಥೆಯ ಚೇರಮನ್ ಎಸ್.ಆರ್. ಡಾ. ನಾಗನೂರ ಹಾಗೂ ಗೌರವ ಕಾರ್ಯದರ್ಶಿ ಡಾ.ವೇಮನ್ ಆರ್.ಸಾವಕಾರ ಶಿಬಿರದಲ್ಲಿ ಉಪಸ್ಥಿತರಿದರು.
ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆಯನ್ನು ಎಂ ರಂ ಜೋಶಿ ಆಸ್ಪತ್ರೆಯ ಖ್ಯಾತ ವೈದ್ಯರು ನಡೆಸಿದರು. ಶಿಬಿರದಲ್ಲಿ ಕೆ.ಎಚ್. ಪಾಟೀಲ ಆಸ್ಪತ್ರೆಯ ಸಿಬ್ಬಂದಿ ಪಾಲ್ಗೊಂಡು ಸಹಾಯ ಸಹಕಾರ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Lalita MP