ಬೆಂಗಳೂರು, 09 ಜುಲೈ (ಹಿ.ಸ.) :
ಆ್ಯಂಕರ್ : ದೇಶದ ಕಾರ್ಮಿಕ ವರ್ಗವನ್ನು ಗುಲಾಮಗಿರಿಗೆ ನೂಕುವ ಕಾರ್ಮಿಕ ಸಂಹಿತೆಗಳನ್ನು ತಕ್ಷಣ ವಾಪಸು ಪಡೆಯಬೇಕೆಂದು ಒತ್ತಾಯಿಸಿ ಹಲವಾರು ಕಾರ್ಮಿಕ ಸಂಘಟನೆಗಳ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಗಾಂಧಿನಗರ ನಾರಾಯಣಸ್ವಾಮಿರವರು ಮಾತನಾಡಿ ಸ್ವಾತಂತ್ರ?ಯ ಪೂರ್ವ ಮತ್ತು ಸ್ವಾತಂತ್ರ?ಯದ ನಂತರ ಕಾರ್ಮಿಕ ವರ್ಗವು ನಡೆಸಿದ ಹಲವಾರು ಸಮರಶೀಲ, ದಿಟ್ಟ ಹೋರಾಟದಿಂದಾಗಿ ಇಂದು ದೇಶದಲ್ಲಿ ಕಾರ್ಮಿಕರಿಗೆ ಹಲವಾರು ಕಾನೂನಾತ್ಮಕ ರಕ್ಷಣೆಗಳನ್ನು ಒದಗಿಸಿದೆ. ಡಾ. ಅಂಬೇಡ್ಕರ್ ರವರು ಕಾರ್ಮಿಕ ಸಚಿವರಾಗಿದ್ದಾಗ ಹಲವಾರು ಕಾನೂನುಗಳನ್ನು ಜಾರಿಗೊಳಿಸಿದ್ದರು. ಈ ಎಲ್ಲಾ ಕಾನೂನುಗಳನ್ನು ಇಂದಿನ ಕೇಂದ್ರ ಸರ್ಕಾರವು ರದ್ದುಪಡಿಸಿ ೨೦೧೯ ಮತ್ತು ೨೦೨೦ ರಲ್ಲಿ ಲೋಕಸಭೆಯಲ್ಲಿ ಯಾವುದೇ ಚರ್ಚೆ ಇಲ್ಲದೇ ಏಕಪಕ್ಷೀಯವಾಗಿ ೪ ಕಾರ್ಮಿಕ ಸಂಹಿತೆಗಳನ್ನು ಅನುಮೋದನೆ ಪಡೆದುಕೊಂಡಿದೆ.
ದೇಶದಲ್ಲಿ ಕಾರ್ಪೋರೇಟ್ ಕಂಪನಿಗಳು ಬಂಡವಾಳ ಹೂಡಲು ದೇಶದಲ್ಲಿರುವ ಕಾರ್ಮಿಕ ಕಾನೂನುಗಳನ್ನು ಸರಳೀಕರಣ ಮಾಡಬೇಕು ಎಂದು ಹೇಳಿದರು.
ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿವೆ ಕೆಲಸದ ಅವಧಿಯನ್ನು ೧೨ ಗಂಟೆ ತನಕ ಹೆಚ್ಚಿಸಲು, ಕಾರ್ಮಿಕರು ಅತ್ಯಂತ ಕಡಿಮೆ ವೇತನಕ್ಕೆ ಯಾವುದೇ ಸೌಲಭ್ಯಗಳು ಇಲ್ಲದೇ ಕಾರ್ಪೋರೇಟ್ ಕಂಪನಿಗಳಲ್ಲಿ ಗುಲಾಮರ ರೀತಿಯಲ್ಲಿ ದುಡಿಯುವ ಪರಿಸ್ಥಿತಿಯನ್ನು ತರಲು ಕೇಂದ್ರ ಸರ್ಕಾರ ಹೊರಟಿರುವುದು ಖಂಡನೀಯ.
ಕಾರ್ಮಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಂಘಗಳನ್ನು ರಚಿಸಿಕೊಳ್ಳಲು ಇರುವ ಸಂವಿಧಾನಬದ್ದ ಹಕ್ಕನ್ನು ನಿರಾಕರಿಸಲಾಗಿದೆ. ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಾರ್ಮಿಕರು ಮುಷ್ಕರ ಮಾಡಿದರೆ ಸಂಘಟಿತ ಅಪರಾಧವೆಂದು ಜೈಲಿಗೆ ಹಾಕಲು ಈ ಸಂಹಿತೆಗಳನ್ನು ಅವಕಾಶ ನೀಡಲಿದೆ. ಆಡಳಿತ ಮಂಡಳಿಯೊಂದಿಗೆ ಸಮಸ್ಯೆಗಳ ಕುರಿತು ಚೌಕಾಸಿ ಮಾಡುವ ಹಕ್ಕನ್ನು ಕಸಿಯಲಾಗಿದೆ. ಜೊತೆಗೆ ಕಾರ್ಮಿಕರ ಮೇಲೆ ಆಡಳಿತ ಮಂಡಳಿಯು ಸಣ್ಣ ತಪ್ಪುಗಳಿಗೆ ಕೆಲಸದಿಂದ ಕಿತ್ತು ಹಾಕಲು ಅವಕಾಶ ಕೊಡಲಿದೆ ಎಂದು ದೂರಿದರು.
ಕಾರ್ಪೋರೇಟ್ ಕಂಪನಿಗಳು ಭಾರೀ ಲಾಭ ಗಳಿಸಲು ಕಾರ್ಮಿಕರನ್ನು ಶೋಷಣೆ ಮಾಡಲು ಈ ಕಾರ್ಮಿಕ ಸಂಹಿತೆಗಳು ಅವಕಾಶ ನೀಡಲಿದೆ. ಈ ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡದೇ ವಾಪಸು ಪಡೆಯಬೇಕೆಂದು ಒತ್ತಾಯಿಸಿ ಕಳೆದ ಐದು ವರ್ಷಗಳಿಂದ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಹೋರಾಟ ಮಾಡುತ್ತಿದ್ದು, ಇವುಗಳನ್ನು ಜಾರಿ ಮಾಡಿದರೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ಕಾರ್ಮಿಕರ ಶ್ರಮವನ್ನು ಕಾರ್ಪೋರೇಟ್ ಕಂಪನಿಗಳು ದೋಚಲು ಅನುಕೂಲ ಕಲ್ಪಿಸಲು ಉದ್ದೇಶದಿಂದ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನ ನಡೆಸುತ್ತಿದೆ. ಕಾರ್ಪೋರೇಟ್ ಕಂಪನಿಗಳು ಹಿತ ಕಾಯುತ್ತಿರುವ ಕೇಂದ್ರ ಸರ್ಕಾರವು ಈ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲು ಎಲ್ಲಾ ಪ್ರಯತ್ನ ನಡೆಸುತ್ತಿದ್ದು, ಕಾರ್ಮಿಕ ಜಂಟಿಯಾಗಿ ಪ್ರತಿಭಟನೆ ನಡೆಸಬೇಕಾಗಿದೆ ಎಂದರು.
ಕಾರ್ಮಿಕ ಸಂಘಗಳ ಚಟುವಟಿಕೆಗಳನ್ನು ನಿಯಂತ್ರಿಸಿ, ಕಾರ್ಪೋರೇಟ್ ಕಂಪನಿಗಳು ಮನಸೋ ಇಚ್ಚೆ ಕಾರ್ಮಿಕರನ್ನು ದುಡಿಸಿಕೊಳ್ಳಲು ಈ ಸಂಹಿತೆಗಳು ಅವಕಾಶ ನೀಡಲಿದೆ. ಖಾಯಂ ಸ್ವರೂಪದ ಕಾರ್ಮಿಕರು ಕೆಲಸದಿಂದ ತೆಗೆದು ಹಾಕಿ, ಎಲ್ಲವೂ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ಯಾವುದೇ ಹಕ್ಕುಗಳು ಇಲ್ಲದೇ ದುಡಿಯಬೇಕಾಗಿದೆ. ಆದ್ದರಿಂದ ಈ ಕಾರ್ಮಿಕ ಸಂಹಿತೆಗಳನ್ನು ವಾಪಸು ಪಡೆಯಬೇಕು. ಅಂಗನವಾಡಿ, ಬಿಸಿಯೂಟ, ಅಂಗನವಾಡಿ ಮತ್ತಿತರರ ಯೋಜನಾ ಕಾರ್ಮಿಕರು, ಗ್ರಾಮ ಪಂಚಾಯಿತಿ ನೌಕರಿರಗೆ ಕನಿಷ್ಠ ೩೬ ಸಾವಿರ ವೇತನ ನೀಡಬೇಕು. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಟಿ.ಎಂ.ವೆಂಕಟೇಶ್ರವರು ಮಾತನಾಡಿ ಕೇಂದ್ರ ಸರ್ಕಾರವು ರೈತ ಮತ್ತು ಕಾರ್ಮಿಕರನ್ನು ಕಾರ್ಪೋರೇಟ್ ಕಂಪನಿಗಳು ಶೋಷಣೆ ಮಾಡಲು ಅವಕಾಶ ಕಲ್ಪಿಸಲು ಬೇಕಾದ ರೀತಿಯ ಕಾನೂನುಗಳನ್ನು ಬದಲಾವಣೆ ಮಾಡುತ್ತಿವೆ. ೨೦೨೦ ರಲ್ಲಿ ದೆಹಲಿಯಲ್ಲಿ ಒಂದು ವರ್ಷ ರೈತರು ದಿಟ್ಟ ಹೋರಾಟದ ಸಂದರ್ಭದಲ್ಲಿ ಪ್ರಧಾನಿ ಮೋದಿರವರು ಮೂರು ಕೃಷಿ ಕಾಯ್ದೆಗಳ ತಿದ್ದುಪಡಿ ಮಾಡುವುದಿಲ್ಲವೆಂದು ಭರವಸೆ ನೀಡಿದ್ದರು. ಆದರೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಒತ್ತಡ ಹೇರಿ ಪರೋಕ್ಷವಾಗಿ ಈ ಮೂರು ಕೃಷಿ ಕಾಯ್ದೆಗಳನ್ನು ಜಾರಿ ಮಾಡಲು ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ. ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ರೈತರು ಮತ್ತು ಕಾರ್ಮಿಕರು ಜಂಟಿಯಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
ಪ್ರತಿಭಟನಾಕಾರನ್ನು ಉದ್ದೇಶಿಸಿ ಅಂಗನವಾಡಿ ನೌಕರರ ಸಂಘದ ಮುಖಂಡರಾದ ವಿ.ಮಂಜುಳ, ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ಎಂ.ಭೀಮರಾಜ್, ಎಸ್.ಆಶಾ, ಕೈಗಾರಿಕಾ ಕಾರ್ಮಿಕ ಸಂಘದ ಮುಖಂಡರಾದ ಹರೀಶ್, ನಿಖಿಲ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಮುಖಂಡರಾದ ವಿ.ವೆಂಕಟರಾಮೇಗೌಡ ಮಾತನಾಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಎನ್.ಕಲ್ಪನಾ, ಲಕ್ಷಿ?ಮದೇವಮ್ಮ, ಹೊಗರಿ ನಾಗರಾಜಪ್ಪ, ಗದ್ದೆಕಣ್ಣೂರು ನಾರಾಯಣಪ್ಪ, ಆರೋಗ್ಯನಾಥನ್, ಶಿವರಾಜ್, ಮುನಿವೆಂಕಟಪ್ಪ, ಮೂರ್ತಿ, ಅಂಬರೀಶ್, ಪೃಥ್ವಿ, ರಮೇಶ್, ಅವಿನಾಶ್, ಜ್ಯೋತಿಕುಮಾರ್, ಸಂತೋಷ್ ಒಂಬರೆಡ್ಡಿ, ಶರತ್, ನಾರಾಯಣಸ್ವಾಮಿ, ಸುನೀಲ್, ಹೆಚ್.ವಿ.ನಿಕೀಲ್, ನಂದನ್ಕುಮಾರ್, ನಿಕೀಲ್ ಬಿ.ಇ. ಅರುಣ, ಶಿವಕುಮಾರ್, ಸೂರ್ಯ, ಮೇಘನಾ ಮತ್ತಿತರರು ಭಾಗವಹಿಸಿದ್ದರು. ಪ್ರತಿಭಟನೆಗೂ ಮುನ್ನ ಗಾಂಧಿ ವನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಚಿತ್ರ : ಕಾರ್ಮಿಕ ಸಂಘಟನೆಗಳಿಂದ ಕೋಲಾರ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ