ಶುಕ್ರವಾರ ಗದಗ ನಗರಕ್ಕೆ ಕೇಂದ್ರ ಸಚಿವ ಜೋಶಿ
ಗದಗ, 09 ಜುಲೈ (ಹಿ.ಸ.) : ಆ್ಯಂಕರ್ : ಸಂವಿಧಾನದ ಆಶಯಗಳನ್ನು ಹತ್ತಿಕ್ಕಿ ಪ್ರಜಾಪ್ರಭುತ್ವದ ಕಗ್ಗೋಲೆಗೆ ಕಾರಣವಾದ ತುರ್ತು ಪರಿಸ್ಥಿತಿ ಕರಾಳತೆ ಅನಾವರಣ ಕಾರ್ಯಕ್ರಮವು “ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು” ವೇದಿಕೆ ವತಿಯಿಂದ ಇದೇ ಶುಕ್ರವಾರ ಸಂಜೆ 04:00 ಗಂಟೆಗೆ ಗದಗ ನಗರದ ಮುಳಗುಂದ ನಾಕಾ ಹತ್ತಿರದ ವಿಠ
ಪೋಟೋ


ಗದಗ, 09 ಜುಲೈ (ಹಿ.ಸ.) :

ಆ್ಯಂಕರ್ : ಸಂವಿಧಾನದ ಆಶಯಗಳನ್ನು ಹತ್ತಿಕ್ಕಿ ಪ್ರಜಾಪ್ರಭುತ್ವದ ಕಗ್ಗೋಲೆಗೆ ಕಾರಣವಾದ ತುರ್ತು ಪರಿಸ್ಥಿತಿ ಕರಾಳತೆ ಅನಾವರಣ ಕಾರ್ಯಕ್ರಮವು “ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು” ವೇದಿಕೆ ವತಿಯಿಂದ ಇದೇ ಶುಕ್ರವಾರ ಸಂಜೆ 04:00 ಗಂಟೆಗೆ ಗದಗ ನಗರದ ಮುಳಗುಂದ ನಾಕಾ ಹತ್ತಿರದ ವಿಠಲಾರೂಢ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಮುಖ್ಯ ವಕ್ತಾರರಾಗಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರು, ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಹಾಗು ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ.ಸಂಕನೂರ, ಮಾಜಿ ಸಚಿವರಾದ ಕಳಕಪ್ಪ ಬಂಡಿ, ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ತೋಟಪ್ಪ(ರಾಜು) ಕುರುಡಗಿ ಉಪಸ್ಥೀತರಿರುವರು. ಕಾರಣ ಬಿಜೆಪಿ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಹಾಗು ಗದಗ ಜಿಲ್ಲೆಯ ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಂಚಾಲಕರಾದ ಲಿಂಗರಾಜ ಪಾಟೀಲ ಮಲ್ಲಾಪೂರ, ಬಿಜೆಪಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್.ಕೆ.ಚವ್ಹಾಣ, ಪಕ್ಕಿರೇಶ ರಟ್ಟಿಹಳ್ಳಿ, ಸಹ-ಸಂಚಾಲಕ ರಮೇಶ ಸಜ್ಜಗಾರ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande