ಭೂ ಸುಧಾರಣಾ ತಿದ್ದುಪಡಿಗೆ ವಿಧಾನ ಸಭೆ ಅಂಗೀಕಾರ
ಬೆಂಗಳೂರು, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ಗ್ರಾಮೀಣ ಭಾಗದಲ್ಲಿ ಸಣ್ಣ ಉದ್ದಿಮೆ ಸ್ಥಾಪಿಸಲು ಎರಡು ಎಕರೆವರೆಗೆ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಬಳಸಲು ಅವಕಾಶ ಕಲ್ಪಿಸುವ 2025ರ ಕರ್ನಾಟಕ ಭೂ ಸುಧಾರಣೆಗಳು ಕಾನೂನು ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು. ಕಂದಾಯ ಸಚಿವ ಕೃಷ್ಣ
ಭೂ ಸುಧಾರಣಾ ತಿದ್ದುಪಡಿಗೆ ವಿಧಾನ ಸಭೆ ಅಂಗೀಕಾರ


ಬೆಂಗಳೂರು, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಭಾಗದಲ್ಲಿ ಸಣ್ಣ ಉದ್ದಿಮೆ ಸ್ಥಾಪಿಸಲು ಎರಡು ಎಕರೆವರೆಗೆ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಬಳಸಲು ಅವಕಾಶ ಕಲ್ಪಿಸುವ 2025ರ ಕರ್ನಾಟಕ ಭೂ ಸುಧಾರಣೆಗಳು ಕಾನೂನು ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.

ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧೇಯಕ ಕುರಿತು ಮಾತನಾಡಿ, ಖಾಸಗಿ ವ್ಯಕ್ತಿಗಳ ಕೃಷಿ ಜಮೀನನ್ನು ಶಿಕ್ಷಣ ಸಂಸ್ಥೆಗಳು ಅಥವಾ ಸಣ್ಣ ಉದ್ದಿಮೆ, ಕೈಗಾರಿಕೆಗಳಿಗೆ ಖರೀದಿಸಲು ಸೆಕ್ಷನ್‌ 109ರ ಅಡಿ ಈ ಹಿಂದೆಯೇ ಅನುಮತಿ ನೀಡಲಾಗಿದೆ. ಆದರೆ ಅನುಮತಿಗಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಬೇಕಿತ್ತು. ಈ ನಿಯಮಕ್ಕೆ ತಿದ್ದುಪಡಿ ಮಾಡಲಾಗಿದ್ದು, ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದರು.

ಸಣ್ಣ ಉದ್ಯಮ ಆರಂಭಿಸುವ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ 4 ಹೆಕ್ಟೇರ್​ವರೆಗಿನ ಭೂಮಿ ಖರೀದಿಗೆ ಅನುಮತಿ ನೀಡಬಹುದು. ಹೀಗೆ ನೀಡುವ ಅನುಮತಿ ಭೂ ಪರಿವರ್ತನೆಯಾಗಿರುತ್ತದೆ.‌ , ಕೃಷಿ ಭೂಮಿಯು ಕೃಷಿಯೇತರ ಚಟುವಟಿಕೆಗೆ ಬಳಕೆಗೆ ಅವಕಾಶ ಸಿಗುತ್ತದೆ ಎಂದರು.

ಈ ಮೊದಲು ಸಣ್ಣ ಉದ್ದಿಮೆದಾರರು, ಶಿಕ್ಷಣ ಸಂಸ್ಥೆಗಳು ಭೂಮಿಯನ್ನು ಪಡೆದು ನಂತರದಲ್ಲಿ ಬೇರೆ ಉದ್ದೇಶಕ್ಕೆ ಬಳಸಲು ಅನುಮತಿ ಕೋರಲಾಗುತ್ತಿತ್ತು. ಅದಕ್ಕೆ ಅನುಮತಿ ನೀಡಲು ಅವಕಾಶ ಇರಲಿಲ್ಲ. ಪ್ರಸ್ತುತ ಆ ನಿಯಮವನ್ನೂ ತಿದ್ದುಪಡಿಸಿ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande