ಗದಗ, 13 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಗದಗ ನಗರದ ಡಾ. ಬಿ ಆರ್ ಅಂಬೇಡ್ಕರ್ ಸಭಾ ಭವನದಲ್ಲಿಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ವಿಷಯ ಕುರಿತು ಗದಗ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರಿಂದ ಚಿತ್ರಕಲಾ ಶಿಬಿರ ಏರ್ಪಡಿಸಲಾಗಿತ್ತು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್ ಅವರು ಈ ಚಿತ್ರಕಲಾ ಶಿಬಿರದಲ್ಲಿ ಚಿತ್ರ ರಚನೆ ವೀಕ್ಷಿಸಿ ಶಿಕ್ಷಕರಿಗೆ ಶುಭ ಕೋರಿದರು. ನಂತರ ಮಾತನಾಡಿ, ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರಿಂದ ಉತ್ತಮ ಚಿತ್ರಕಲೆಗಳು ಮೂಡಿಬರಲಿ. ಈ ಚಿತ್ರಗಳು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಮೆರಗು ನೀಡುವಂತಾಗಲಿ ಎಂದು ಹೇಳಿದರು.
ನುರಿತು ಚಿತ್ರಕಲಾ ಶಿಕ್ಷಕರು ರಚಿಸುವ ಚಿತ್ರಗಳು ಚಿತ್ರಗಳನ್ನು ವಿಕ್ಷಿಸುವ ಮಕ್ಕಳು, ಸಾರ್ವಜನಿಕರಿಗೆ ಪ್ರಜಾಪ್ರಭುತ್ವ ಕುರಿತು ಗೌರವ ಇಮ್ಮಡಿಗೊಳ್ಳಲು ಪ್ರೇರಣೆಯಾಗಲಿ. ಇದರಿಂದ ನಮ್ಮ ಪ್ರಜಾಪ್ರಭುತ್ವ ಇನ್ನಷ್ಟು ದೃಡವಾಗಲು ಸಹಕಾರ ದೊರಯುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್ ಅಭಿಪ್ರಾಯ ಪಟ್ಟರು.
ಚಿತ್ರಕಲಾ ಶಿಕ್ಷಕರು ತಮ್ಮದೇ ರೀತಿಯ ಶೈಲಿಯಲ್ಲಿ ಚಿತ್ರಗಳನ್ನು ಮನೋಜ್ಞವಾಗಿ ರಚಿಸುವ ಮೂಲಕ ಗಮನ ಸೆಳೆದರು. ನನ್ನ ಮತ ನನ್ನ ಹಕ್ಕು, ಭಾರತ ಸಂವಿಧಾನ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ನನ್ನ ಮತ ನನ್ನ ಭವಿಷ್ಯ ಹಾಗೂ ಅಂಬೇಡ್ಕರ್ ಸಂವಿಧಾನ ಕುರಿತ ವಿಷಯದ ಬಗ್ಗೆ ತಮ್ಮ ಕಲೆ ಮೂಲಕ ಬೆಳಕು ಚೆಲ್ಲಿದರು.
ಈ ವೇಳೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ ಸೇರಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಜಿಲ್ಲೆಯ ಚಿತ್ರಕಲಾ ಶಿಕ್ಷಕರು, ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP