
ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ನಗರದ ಅಲ್ ಅಮೀನ ಹತ್ತಿರದಲ್ಲಿ ನಡೆದಿದೆ.
29 ವರ್ಷದ ರಾಮು ಸ್ಥಳದಲ್ಲಿಯೇ ಮೃತಪಟ್ಟಿರುವ ಬೈಕ್ ಸವಾರ. ಇನ್ನು ಬೈಕ್ನಲ್ಲಿದ 2 ವರ್ಷದ ಮಗುವಿನ ಒಂದು ಕಾಲು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಮಗುವನ್ನು ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಿ, ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande