ರಾಯಚೂರು, 16 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ.ನಾಗಲಕ್ಷ್ಮೀ ಚೌಧರಿ ಅವರು ಸೆಪ್ಟೆಂಬರ್ 17ರಿಂದ ಸೆ.19ರವರೆಗೆ ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಸೆ.17ರ ಬೆಳಿಗ್ಗೆ 7 ಗಂಟೆಗೆ ಕಲಬುರಗಿ ನಗರದಿಂದ ನಿರ್ಗಮಿಸಿ ಬೆಳಿಗ್ಗೆ 10.30ಕ್ಕೆ ರಾಯಚೂರ ನಗರಕ್ಕೆ ಆಗಮಿಸುವರು. ಅಂದು ಬೆಳಿಗ್ಗೆ 11 ಗಂಟೆಗೆ ರಾಯಚೂರಿನ ಎಸ್ಎಸ್ಆರ್ಜಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಡೆಯುವ ಪಿಯು ಹಾಗೂ ಪದವಿ ವಿದ್ಯಾರ್ಥಿನಿಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಮಧ್ಯಾಹ್ನ 1 ಗಂಟೆಗೆ ಎಸ್ಎಸ್ಆರ್ಜಿ ಕಾಲೇಜಿನಿಂದ ನಿರ್ಗಮಿಸಿ ಮಧ್ಯಾಹ್ನ 1.30ಕ್ಕೆ ರಾಯಚೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡುವರು. ಅಲ್ಲಿಂದ 2.30ಕ್ಕೆ ನಿರ್ಗಮಿಸಿ ಮಧ್ಯಾಹ್ನ 3 ಗಂಟೆಗೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ಬಳಿಯಲ್ಲಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವರು.
ಸಂಜೆ 5.30ಕ್ಕೆ ರಾಯಚೂರಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಭೇಟಿ ನೀಡಿ ರಾಯಚೂರಿನಲ್ಲಿ ವಾಸ್ತವ್ಯ ಮಾಡುವರು.
ಸೆ.18ರ ಬೆಳಿಗ್ಗೆ 10 ಗಂಟೆಗೆ ರಾಯಚೂರಿನ ರಂಗಮಂದಿರದಲ್ಲಿ ಕಲಾ ಸಂಕುಲ ಸಂಸ್ಥೆ ಹಮ್ಮಿಕೊಂಡ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಭಾಗಿಯಾಗುವರು.
10.30ಕ್ಕೆ ಜಿಲ್ಲಾ ರಂಗಮಂದಿರದಿಂದ ನಿರ್ಗಮಿಸಿ ಮಧ್ಯಾಹ್ನ 12.30ಕ್ಕೆ ಸಿಂಧನೂರ ನಗರಕ್ಕೆ ಹೊರಟು ಸಿಂಧನೂರಿನ ಸುಕ್ಕಲಪೇಟೆ ರಸ್ತೆಯಲ್ಲಿರುವ ರಂಗಮಂದಿರದಲ್ಲಿ ಸಿಂದೋಳ ಸಮುದಾಯದ ಅಲೆಮಾರಿ ಮಹಿಳೆಯರು ಮತ್ತು ದೇವದಾಸಿ ಮಹಿಳೆಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಸಿಂಧನೂರು ತಾಲೂಕು ಆಸ್ಪತ್ರೆಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಸಿಂಧನೂರು ಪೆÇಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಸಿಂಧನೂರ ನಗರದಿಂದ ನಿರ್ಗಮಿಸಿ ಸಂಜೆ 7 ಗಂಟೆಗೆ ರಾಯಚೂರ ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.
ಸೆ.19ರ ಬೆಳಗ್ಗೆ 11 ಗಂಟೆಗೆ ರಾಯಚೂರ ನಗರದಲ್ಲಿ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡ ಮಹಿಳೆಯರೊಂದಿಗೆ ಮಹಿಳಾ ಸ್ಪಂದನಾ ಮತ್ತು ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು. ರಾತ್ರಿ 9 ಗಂಟೆಗೆ ರಾಯಚೂರ ನಗರದಿಂದ ನಿರ್ಗಮಿಸಿ ರೈಲು ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್