ಗದಗ, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಿರಿಯರನ್ನು ದೇವರ ಸಮಾನವಾಗಿ ನೋಡಿಕೊಂಡರೇ ಪುಣ್ಯ ಪ್ರಾಪ್ತಿ ಆಗುತ್ತದೆ. ವಯೋವ್ರದ್ದರಿಗೆ, ಅಂಗವೀಕಲರಿಗೆ ಸಹಾಯ ಮಾಡಿ ಸಶಕ್ತ ಭಾರತವನ್ನಾಗಿ ಮಾಡೋಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗ ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರದ ವತಿಯಿಂದ ರಾಷ್ಟ್ರೀಯ ವಯೋಶ್ರೀ ಯೋಜನೆ ಅಡಿಯಲ್ಲಿ 'ನಮ್ಮ ಹಿರಿಯ ನಾಗರಿಕರಿಗೆ ಅಗತ್ಯವಾದ ನೆರವಿನ ಸಾಧನ ಹಾಗೂ ಸಹಾಯಕ ಉಪಕರಣ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಒಂದೇ ವೇದಿಕೆಯಲ್ಲಿ ಹಿರಿಯರನ್ನು ನೋಡಿದ ಸಂತಷವಾಗುತ್ತಿದೆ. ಇನ್ನೊಂದು ಕಡೆ ಹಿರಿತನದಲ್ಲಿ ಎದುರಿಸುತ್ತಿರುವ ಕಷ್ಟಗಳನ್ನು ನೋಡಿ ದುಃಖವಾಗುತ್ತಿದೆ.
ಹುಟ್ಟು ಆಕಸ್ಮಿಕ, ಸಾವು ಕೂಡ ಆಕಸ್ಮಿಕವಾಗಿದೆ. ಬದುಕು ಮಾತ್ರ ನಮ್ಮ ಕೈಯಲ್ಲಿದೆ. ಬದುಕಿನಲ್ಲಿ ಅರ್ಥಪೂರ್ಣವಾಗಿ ಜೀವನ ಸಾಗಿಸಬೇಕು. ಬಡತನವಿರಲಿ, ಸಿರಿತನವಿರಲಿ ಪ್ರತಿಯೊಬ್ಬ ಮನುಷ್ಯನ ಬದುಕು ಸಾರ್ಥಕತೆಯಿಂದ ಕೂಡಿರಬೇಕು. ಇದರಿಂದ ಮನುಷ್ಯ ಶ್ರೇಷ್ಠನಾಗುತ್ತಾನೆ ಮನುಷ್ಯ ಹುಟ್ಟಿದಾಗ ತಂದೆ-ತಾಯಿ, ಬಂಧು-ಬಳಗದ ಆಶ್ರಯವಿಲ್ಲದೇ ಬೆಳೆಯಲು ಸಾಧ್ಯವಿಲ್ಲ. ಎಲ್ಲ ಸಂಬಂಧಗಳಗಿಂತ ತಾಯಿ ಸಂಬಂಧ ಶ್ರೇಷ್ಠ ಸಂಬಂಧವಾಗಿದೆ. ತಾಯಿ ಗರ್ಬದಿಂದ ಭೂ ತಾಯಿ ಗರ್ಭದವರೆಗೆ ನಮ್ಮ ಸಂಬಂಧ ಇರುತ್ತದೆ. ಇದರ ನಡುವೆ ಒಬ್ದರನ್ನೊಬ್ಬರನ್ನು ಪ್ರೀತಿಸುವ ಬದುಕನ್ನು ಕಟ್ಟಿಕೋಳ್ಳಬೇಕು. ವಯ್ಯಸ್ಸಾದಂತೆ ಮಗುವಿನ ಗುಣಗಳು ಹಿರಿಯರಲ್ಲಿ ಬರುತ್ತವೆ. ಆತ್ಮ ಶಕ್ತಿಯನ್ನು ಗಟ್ಟಿಗೋಳಿಸಬೇಕಿದೆ. ಹಿರಿಯರು ಸಂತೋಷ, ಸಮಾಧಾನದಿಂದ ಇರಬೇಕು ಎಂದರು.
ಸರ್ಕಾರ ಹಿರಿಯರ ಉರುಗೋಲಾಗಿ ನಿಂತಿದೆ ನಾನು ಸಿಎಂ ಆಗಿದ್ದಾಗ ಹಿರಿಯ ನಾಗರಿಕರ ಸಂದ್ಯಾ ಸುರಕ್ಷಾ, ಅಂಗವೀಕಲರ ಪೆನ್ಷನ್ ಹಣವನ್ನು ಹೆಚ್ಚು ಮಾಡಿದೆ. ಕ್ಯಾನ್ಸರ್ ನ ಕಿಮೋಥೆರಪಿ ಹಣವನ್ನು 30 ಸಾವಿರದಿಂದ 60 ಸಾವಿರಕ್ಕೆ ಹೆಚ್ಚು ಮಾಡಿದೆ. ಕಿಡ್ನಿ ಡಯಾಲಸಿಸ್ 30 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಳ ಮಾಡಿದ ತೃಪ್ತಿ ಇದೆ. ಪೌರ ಕಾರ್ಮಿಕರನ್ನು ಖಾಯಂಗೊಳಿಸಿದ್ದೇನೆ ಸುಡುಗಾಡಿನಲ್ಲಿ ಕೆಲಸ ಮಾಡುವವಗೆ ಸರ್ಕಾರಿ ನೌಕರಸ್ಥರನ್ನಾಗಿ ಮಾಡಿದ್ದೇನೆ ಎಂದರು.
ಹಿರಿಯ ನಾಗರಿಕ ಅಧಿಕಾರಿಗಳು ಪುಣ್ಯವಂತರು. ಹಿರಿಯರ ದೇವರ ಸ್ವರೂಪಿಗಳಾಗಿದ್ದಾರೆ. ಬದುಕಿನಲ್ಲಿ ಸವಾಲನ್ನು ಯಶಸ್ವಿಯಾಗಿ ಸಾಗಿಸಿದ್ದಾರೆ. ಅವರನ್ನು ದೇವರ ಸಮಾನವಾಗಿ ನೋಡಿಕೊಂಡರೇ ಪುಣ್ಯ ಪ್ರಾಪ್ತಿ ಆಗುತ್ತದೆ. ವಯೋವ್ರದ್ದರಿಗೆ, ಅಂಗವೀಕಲರಿಗೆ ಸಹಾಯ ಮಾಡಿ ಸಶಕ್ತ ಭಾರತವನ್ನಾಗಿ ಮಾಡೋಣ ಎಂದು ಹೇಳಿದರು.
ಶಾಸಕ ಡಾ. ಚಂದ್ರು ಕೆ. ಲಮಾಣಿ ಮಾತನಾಡಿ, ಮೂರು ತಿಂಗಳ ಹಿಂದೆ ಪ್ರತಿಯೊಂದು ತಾಲ್ಲೂಕ ಆಸ್ಪತ್ರೆಯಲ್ಲಿ 60 ವರ್ಷ ಮೆಲ್ಪಟ್ಟ ಎಲ್ಲರನ್ನು ಗುರುತಿಸಿ 663 ಸಲಕರಣೆ ವಿತರಿಸಲಾಗುತ್ತಿದೆ. 60 ವರ್ಷ ಆದ ನಂತರ ವಯೋ ಸಹಜ ಕಾಯಿಲೆ ಬರುತ್ತವೆ. ಆರೋಗ್ಯದ ಕಡೆ ಹೆಚ್ಚು ಒತ್ತು ನೀಡಬೇಕು. 50ವರ್ಷವಾದ ನಂತರ ಬಿಪಿ, ಶುಗರ್, ಕ್ಯಾನ್ಸರ್ ಬರುವುದು ಇಂದಿನ ದಿನಮಾನಗಳಲ್ಲಿ ಸಹಜವಾಗಿದೆ. ಹಿರಿಯರು ನಡೆಯುವಾಗ ಎಚ್ಚರಿಕೆ ವಹಿಸಬೇಕು. ಒಮ್ಮೆ ಬಿದ್ದರೇ ಮೊದಲಿನ ತರ ನಡೆಯಲು ಸಾಧ್ಯವಾಗದಿರಬಹುದು. ಸಲಕರಣೆಗಳ ಸದುಪಯೋಗ ಪಡೆದುಕೋಳ್ಳಬೇಕು ಅಂತ ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಮಾತನಾಡಿ, ಕೇಂದ್ರ ಸರ್ಕಾರ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಜಿಲ್ಲೆಯ ಫಲಾನುಭವಿಗಳು ಸದುಪಯೋಗ ಪಡೆದುಕೋಳ್ಳಬೇಕು. ರಾಷ್ಟ್ರೀಯ ಇಂದಿರಾ ಗಾಂಧಿ ಯೋಜನೆ, ರಾಷ್ಟ್ರೀಯ ಭದ್ರತಾ ಯೋಜನೆ ಸೇರಿದಂತೆ ಅಂಕವೀಕಲರಿಗೆ, ವಯೋವೃದ್ಧರಿಗೆ ಅನೇಕ ಯೋಜನೆಗಳು ಇದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಜಿಲ್ಲಾಡಳಿತದ ಮೂಲಕ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಕ್ಬರಸಾಬ ಬಾಬರ್ಜಿ, ತಹಸೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ.ಮಹಾಂತೇಶ ಸೇರಿದಂತೆ ಮುಂತಾದವರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP