ಗರ್ಭಿಣಿ ಮಹಿಳೆಯರಿಗೆ ಸೀಮಂತ, ಮಕ್ಕಳ ಹುಟ್ಟು ಹಬ್ಬ
ವಿಜಯಪುರ, 18 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗರ್ಭಿಣಿ, ಭಾಣಂತಿಯರ ಹಾಗೂ ಚಿಕ್ಕ ಮಕ್ಕಳಲ್ಲಿನ ಅಪೌಷ್ಟಿಕತೆ ಮತ್ತು ರಕ್ಷಹೀನತೆಯನ್ನು ತಡೆಯಲು ಸಾರ್ವಜನಿಕರಲ್ಲಿ ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನ
ಗರ್ಭಿಣಿ


ವಿಜಯಪುರ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗರ್ಭಿಣಿ, ಭಾಣಂತಿಯರ ಹಾಗೂ ಚಿಕ್ಕ ಮಕ್ಕಳಲ್ಲಿನ ಅಪೌಷ್ಟಿಕತೆ ಮತ್ತು ರಕ್ಷಹೀನತೆಯನ್ನು ತಡೆಯಲು ಸಾರ್ವಜನಿಕರಲ್ಲಿ ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಹಾಗೂ ಶಿಶು ಅಭಿವೃಧ್ದಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮತ್ತು ತಾಲೂಕಾ ಮಟ್ಟದ ಪೋಷನ್ ಮಾಸಾಚರಣೆ, ಸ್ವಾಸ್ಥö್ಯ ನಾರಿ, ಸಶಕ್ತ ಕುಟುಂಬ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಿಸುವ ಪ್ರತಿಯೊಬ್ಬ ಮಗು ದೇಶದ ಆಸ್ತಿಯಾಗಬೇಕೆಂಬ ಉದ್ದೇಶದಿಂದ ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯಲ್ಲಾಗುವ ಅಪಾಯ ತಪ್ಪಿಸುವ ನಿಟ್ಟಿನಲ್ಲಿ ಈ ಪೋಷನ್ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಗರ್ಭಾವಸ್ಥೆಯ ಸಮಯದಲ್ಲಿ ಕಬ್ಬಿಣಾಂಶದ ಕೊರತೆಯಿಂದ ತಾಯಂದಿರು ಮರಣ ಹೊಂದುತ್ತಿದ್ದಾರೆ. ಆರೋಗ್ಯ ಅಮೂಲ್ಯವಾಗಿದ್ದು, ತಮ್ಮ ಜೀವನ ಕಳೆದುಕೊಳ್ಳುವಂತಾಗಬಾರದು. ಗರ್ಭಿಣಿ ಮಹಿಳೆಯರು ರಕ್ತ ತಪಾಸಣೆ ಮಾಡಿಸಿಕೊಂಡು ತಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಂಡಾಗ ಮಾತ್ರ ಸಮಾಜಕ್ಕೆ ಆರೋಗ್ಯವಂತ ಮಗುವನ್ನು ಕೊಡಲು ಸಾಧ್ಯವಾಗುತ್ತದೆ ಎಂದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಂಟಿ ನಿರ್ದೇಶಕ ನಟರಾಜ್ ಮಾತನಾಡಿ ತಾಯಿ ಗರ್ಬಿಣಿಯಿಂದ ಹಿಡಿದು ಮಗು ಜನಿಸಿ, ಆರು ವರ್ಷ ತುಂಬಿ ಶಾಲೆಗೆ ಹೋಗುವವರೆಗೆ ಸಂಪೂರ್ಣ ಮಗುವಿನ ಮಾಹಿತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಇರುತ್ತದೆ. ಅಪೌಷ್ಠಿಕತೆಯಿಂದ ಹುಟ್ಟಿದ ಮಕ್ಕಳು, ಭಾಣಂತಿಯರು ಮರಣ ಹೊಂದುತ್ತಿದ್ದಾರೆ. ಅದನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಸಮರ್ಪಕ ಅನುಷ್ಠಾನಕ್ಕೆ ತರುವ ಕೆಲಸವಾಗಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕೃಷಿ ವಿಜ್ಞಾನ ಕೇಂದ್ರ ವಿಷಯ ತಜ್ಞೆ ಡಾ.ರಮೀತ ಬಿ.ಈ ಅವರು ಪೌಷ್ಠಿಕ ಆಹಾರದ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಅವರು ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಂವಾದ ನಡೆಸಿದರು.

ಗರ್ಭಿಣಿಯರಿಗೆ ಕೊಡುವ ಆಹಾರದ ಪ್ರಮಾಣ ಹೆಚ್ಚಿಗೆ ಆಗಬೇಕಿದೆ. ತರಕಾರಿ ಪದಾರ್ಥಗಳನ್ನು ಹೆಚ್ಚಿಗೆ ನೀಡಲು ತಿಳಿಸಿದರು. ಅಲ್ಲದೇ ಫೇಸ್ ರಿಕಂಗ್ ನ್ಯಾಜೇಷನ್ ಇರುವದರಿಂದ ತೊಂದರೆಯಾಗುತ್ತಿದೆ ಎಂದು ತಿಳಿಸಿದಾಗ ಪಾರದರ್ಶಕವಾಗಿ ಮಾಡಲು ಈ ವ್ಯವಸ್ಥೆ ಮಾಡಲಾಗಿದೆ ಎಂದು ದಿಡ್ಡಿ ತಿಳಿಸಿದರು.

ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ೫ ಜನ ಗರ್ಭಿಣಿಯರಿಗೆ ಸೀಮಂತ ಕಾರ್ಯ, ೬ ತಿಂಗಳು ಪೂರ್ಣಗೊಂಡ ೫ ಜನ ಮಕ್ಕಳಿಗೆ ಅನ್ನಪ್ರಾಶನ ಹಾಗೂ ಮೂರು ಜನ ಮಕ್ಕಳ ಹುಟ್ಟು ಹಬ್ಬ ಆಚರಿಸಲಾಯಿತು. ಅಲ್ಲದೇ ಏಕ್ ಪೇಡ್ ಮಾ ಕೆ. ನಾಮ್ ತಾಯಿ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮದಡಿ ಸಾಂಕೇತಿಕವಾಗಿ ಸಸಿಗಳನ್ನು ವಿತರಣೆ ಮಾಡಲಾಯಿತು. ಪ್ರಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಸುಮಂಗಲಾ ಹಿರೇಮನಿ, ತಾಲೂಕಾ ಶಿಶು ಅಭಿವೃದ್ದಿ ಯೋಜನಾಧಿಕಾರಿ ರಮೇಶ ಸೂಳಿಕೇರಿ, ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande