ತಾಯಿ ಮರಣ ತಡೆಗೆ ಕ್ರಮ ವಹಿಸಿ : ಸಿಇಓ ಕುರೇರ
ವಿಜಯಪುರ, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಪೌಷ್ಠಿಕತೆ, ರಕ್ತಹೀನತೆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಮೂಲಕ ತಾಯಿ ಮರಣ ಸಂಭವಿಸದಂತೆ ನೋಡಿಕೊಳ್ಳಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ
ಕುರೇರ


ವಿಜಯಪುರ, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಪೌಷ್ಠಿಕತೆ, ರಕ್ತಹೀನತೆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಮೂಲಕ ತಾಯಿ ಮರಣ ಸಂಭವಿಸದಂತೆ ನೋಡಿಕೊಳ್ಳಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬಾಗಲಕೋಟೆಯ ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಂತ್ರಜ್ಞಾನ ಬಹಳ ಮುಂದುವರಿದಿದ್ದು, ಬದುಕಿಸಲು ಪ್ರಯತ್ನ ಮಾಡಬೇಕು. ಪೌಷ್ಠಿಕತೆಯ ಬಗ್ಗೆ ಆಶಾ ಕಾರ್ಯಕರ್ತೆಯರ ಸಭೆಯಲ್ಲಿ ತಿಳಿಸಿ ಗರ್ಭಿಣಿ ಮಹಿಳೆಯ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಆಶಾ ಕಾರ್ಯಕರ್ತೆಯರು ನಿಗಾವಹಿಸಬೇಕು. ಶಾಲಾ ದಾಖಲಾತಿ ಆಧಾರ ಮೇಲೆ ತಾಯಿ ಕಾರ್ಡ ನೀಡಿ. ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳಬೇಕು. ಬಾಲ್ಯವಿವಾಹ ನಡೆಯುತ್ತಿದ್ದಲ್ಲಿ ವಿವಿಧ ಇಲಾಖೆಯ ಜೊತೆ ಜಂಟಿಯಾಗಿ ನಿಲ್ಲಿಸುವ ಕಾರ್ಯವಾಗಬೇಕು ಎಂದರು. ಅವಶ್ಯಕತೆಗೆ ಅನುಗುಣವಾಗಿ ಔಷಧಿ ಇಂಡೆAಟ್ ನೀಡಬೇಕು. ಹೆಚ್ಚುವರಿಯಾಗಿ ಖರೀದಿಸಿದ ಔಷಧಿಯನ್ನು ಇ-ಔಷಧಿ ಪೋರ್ಟಲ್‌ನಲ್ಲಿ ದಾಖಲು ಮಾಡಲು ಸೂಚಿಸಿದರು. ತಾಲೂಕಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬರುತ್ತಿರುವ ಬಗ್ಗೆ ಮೇಲಾಧಿಕಾರಿಗಳು ನಿಗಾವಹಿಸಬೇಕು. ಪ್ರತಿದಿನ ಹಾಜರಾತಿ ವಿಶ್ಲೇಷಣೆ ಮಾಡಬೇಕು. ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಆಗಾಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಂದಾಗ ಮಾತ್ರ ಸುಧಾರಣೆ ತರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ರಾಷ್ಟಿçÃಯ ಟಿಬಿ ನಿರ್ಮೂಲನೆ ಯೋಜನೆಯಡಿ ಜಿಲ್ಲೆಯಲ್ಲಿ ಈಗಾಗಲೇ ೨೭ ಗ್ರಾಮಗಳನ್ನು ಟಿಬಿ ಮುಕ್ತ ಗ್ರಾಮಗಳನ್ನಾಗಿ ಘೋಷಿಸಲಾಗಿದೆ. ಇನ್ನು ೬೪ ಗ್ರಾಮಗಳನ್ನು ಘೋಷಿಸಲು ಶಿಫಾರಸ್ಸು ಮಾಡಲಾಗುತ್ತಿದೆ. ಗ್ರಾಮಗಳಲ್ಲಿ ಪರೀಕ್ಷೆ ಗುಣಮಟ್ಟದಿಂದ ಕೂಡಿರಬೇಕು. ಟಿಬಿ ಮುಕ್ತ ಗ್ರಾಮ ಎಂದು ಘೋಷಿಸಿದ ಮೇಲೆ ಪ್ರಕರಣಗಳು ಕಂಡು ಬರಬಾರದು. ಆ ನಿಟ್ಟಿನಲ್ಲಿ ಕೆಲಸ ಆಗಬೇಕು. ಗೃಹ ಆರೋಗ್ಯ ಯೋಜನೆಯಡಿ ಗ್ರಾಮೀಣ ಪ್ರದೇಶದ ಮನೆ ಮನೆಗೆ ತೆರಳಿ ೩೦ ಮೇಲ್ಪಟ್ಟವರಿಗೆ ೧೪ ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಹಚ್ಚಿ ಉಚಿತವಾಗಿ ಔಷಧಿ ವಿತರಣೆ ನೀಡುವ ಕಾರ್ಯ ಸರಿಯಾಗಿ ನಡೆಯಬೇಕಿದೆ ಎಂದರು.

ಮನೆ ಮನೆಗೆ ತೆರಳಿದ ಸಂದರ್ಭದಲ್ಲಿ ಪ್ರಧಾನಮಂತ್ರ ಸುರಕ್ಷಾ ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಗಳ ಅರಿವು ಮೂಡಿಸುವ ಕೆಲಸವಾಗಬೇಕು. ಜಿಲ್ಲಾ ತಂಬಾಕು ನಿಯಂತ್ರಣ ಘಟಕವು ಜಿಲ್ಲೆಯಲ್ಲಿ ಮಾರಾಟ ಮಾಡುವ ಅಂಗಡಿಗಳ ಮೇಲೆ ಹೆಚ್ಚಿನ ದಾಳಿಗಳನ್ನು ನಡೆಸುವ ಕಾರ್ಯವಾಗಬೇಕು. ಶಾಲೆ ಮತ್ತು ಕಾಲೇಜುಗಳಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಹಾಗೂ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವಾಗುವದನ್ನು ತಡೆಯುವ ಕಾರ್ಯವಾಗಬೇಕು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ.ಎನ್., ಜಿಲ್ಲಾ ಶಸ್ತç ಚಿಕಿತ್ಸಕ ಮಹೇಶ ಕೋನಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾ ಆಯುಷ ಅಧಿಕಾರಿ ಡಾ.ಎಸ್.ಜಿ.ಮಠ ಸೇರಿದಂತೆ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ತಾಲೂಕಾ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಛಾಯಾಚಿತ್ರ ಲಗತ್ತಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande