ಉತ್ತರಾಖಂಡ್ ಮಳೆ ವಿಪತ್ತು : ಮುಂದುವರೆದ ರಕ್ಷಣಾ ಕಾರ್ಯ
ಡೆಹ್ರಾಡೂನ್, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡ್‌ನಲ್ಲಿ ಭಾರಿ ಮಳೆಯ ಪರಿಣಾಮವಾಗಿ ಡೆಹ್ರಾಡೂನ್, ಚಮೋಲಿ ಮತ್ತು ಉತ್ತರಕಾಶಿ ಜಿಲ್ಲೆಗಳಲ್ಲಿ ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು, ಕೊನೆಯ ವ್ಯಕ್ತಿ ಪತ್ತೆಯಾಗುವವರೆಗೂ ಶೋಧ ನಿಲ
ಉತ್ತರಾಖಂಡ್ ಮಳೆ ವಿಪತ್ತು : ಮುಂದುವರೆದ ರಕ್ಷಣಾ ಕಾರ್ಯ


ಡೆಹ್ರಾಡೂನ್, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಉತ್ತರಾಖಂಡ್‌ನಲ್ಲಿ ಭಾರಿ ಮಳೆಯ ಪರಿಣಾಮವಾಗಿ ಡೆಹ್ರಾಡೂನ್, ಚಮೋಲಿ ಮತ್ತು ಉತ್ತರಕಾಶಿ ಜಿಲ್ಲೆಗಳಲ್ಲಿ ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು, ಕೊನೆಯ ವ್ಯಕ್ತಿ ಪತ್ತೆಯಾಗುವವರೆಗೂ ಶೋಧ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ.

ತೆಹ್ರಿ ಜಿಲ್ಲೆಯ ಧನೌಲ್ತಿ ತಹಸಿಲ್‌ನ ಸಕ್ಲಾನಾ ಪ್ರದೇಶದ ಹಳ್ಳಿಗಳಿಗೆ ಹೆಲಿಕಾಪ್ಟರ್ ಮೂಲಕ ಪರಿಹಾರ ಸಾಮಗ್ರಿ ಹಾಗೂ ವೈದ್ಯಕೀಯ ನೆರವು ತಲುಪಿಸಲಾಗಿದೆ. ಜಿಲ್ಲಾಧಿಕಾರಿಗಳು ತಕ್ಷಣದ ಪರಿಹಾರ ಕ್ರಮಗಳಿಗೆ ಆದೇಶ ನೀಡಿದ್ದಾರೆ.

ಹವಾಮಾನ ಇಲಾಖೆ ಡೆಹ್ರಾಡೂನ್, ತೆಹ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಕುರಿತು ಎಚ್ಚರಿಕೆ ನೀಡಿದೆ. ಜನರಿಗೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande