ಕೋಲಾರ, 0೨ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೆಜಿಎಫ್ ತಾಲ್ಲೂಕಿನ ಪಾರಂಡಹಳ್ಳಿಯಲ್ಲಿರುವ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸ ಸಮರ್ಪಕವಾಗಿ ವಿಲೇವಾರಿ ಮಾಡದಿರಲು ಅಧಿಕಾರಿಗಳ ಕರ್ತವ್ಯ ನಿರ್ವಹಣೆ ವೈಪಲ್ಯವೇ ಕಾರಣವಾಗಿದ್ದು ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಪರಿಶೀಲನೆ ನಡೆಸುವ ಮೂಲಕ ಸಮಸ್ಯೆ ಗೆ ಪರಿಹಾರ ಕಲ್ಪಿಸುವುದಾಗಿ ಶಾಸಕಿ ರೂಪಕಲಾ ಶಶಿಧರ್ ಹೇಳಿದರು.
ಕೆಜಿಫ್ ನಗರದ ಹೋರವಲಯದ ಪಾರಂಡಹಳ್ಳಿ ಪಂಚಾಯಿತಿ ವ್ಯಾಪ್ತಿ ಅಲ್ಲಿಕುಂಟೆ ಹಾಗೂ ಗರುಡರಾಜಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಶಾಸಕಿ ರೂಪಕಲಾಶಶಿಧರ್ ೪೦,೫೦ ವರ್ಷಗಳ ಹಿಂದೆ ಯುಜಿಡಿ ಸಂಪರ್ಕ ಇರಲಿಲ್ಲ ಆದರೆ ಇಂದು ಯುಜಿಡಿ ಯೋಜನೆ ಜಾರಿಯಾಗಿದ್ದರು ಅಧಿಕಾರಿಗಳ ಅಸರ್ಮಾಪಕ ಕರ್ತವ್ಯದಿಂದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ರುವ ಕಸದಿಂದ ಪಾರಂಡಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಟ್ಟ ವಾಸನೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಪ್ರತಿ ಮನೆಗೂ ಸರಿಯಾಗಿ ಯುಜಿಡಿ ಸಂಪರ್ಕ ವನ್ನು ಕಲ್ಪಿಸುವ ಮೂಲಕ ಕಸದ ಸಮಸ್ಯೆ ಗೆ ಪರಿಹಾರ ಕಲ್ಪಿಸುವುದಾಗಿ ಹೇಳಿದರು.
ನಗರಸಭೆ ವ್ಯಾಪ್ತಿಯ ಹಲವು ವಾರ್ಡ್ಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸುವಂತೆ ಮನವಿ ಮಾಡಿದ್ದು ಇದೀಗ ಪ್ರತಿ ಯೊಂದು ವಾರ್ಡ್ಗಳಲ್ಲಿ ೨ರಿಂದ ೩ ಘಟಕ ಪ್ರಾರಂಭಿಸಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಪಾರಂಡಹಳ್ಳಿ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ಮುಖ್ಯ ರಸ್ತೆ ಗೆ ಸಂಪರ್ಕ ಕಲ್ಪಿಸುವ ಸಲುವಾಗಿ ೧೦೦ ಕೋಟಿ ಅನುದಾನ ಬಿಡುಗಡೆ ಯಾಗಿದ್ದು ಶೇಕಡ ೭೫ ರಷ್ಟು ಕಾಮಗಾರಿ ಗಳನ್ನು ಪೂರ್ಣಗೊಳಿಸಲಾಗಿದ್ದು ಉಳಿಕೆ ಕಾಮಗಾರಿ ಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವುದಾಗಿ ತಿಳಿಸಿದರು.
ಈ ವೇಳೆ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವೆಂಕಟರಾಮರೆಡ್ಡಿ, ಪಾರಂಡಹಳ್ಳಿ ಪಂಚಾಯಿತಿ ಅಧ್ಯಕ್ಷೆ ವಾಣಿ ಶ್ರೀನಿವಾಸ, ಸದಸ್ಯ ರಾದ ಕುಮಾರ್, ಪ್ರಕಾಶ್, ರವಿಂದ್ರ ರೆಡ್ಡಿ, ಬೇತಮಂಗಲ ಪಂಚಾಯಿತಿ ಅಧ್ಯಕ್ಷ ವೀನುಕಾಥಿ೯ಕ್, ಎಪಿಎಂಸಿ ಅಧ್ಯಕ್ಷ ವಿಜಯರಾಘವರೆಡ್ಡಿ, ಸದಸ್ಯ ದಶಲಕ್ಷ ರೆಡ್ಡಿ ,ಮಾಜಿ ಅಧ್ಯಕ್ಷ ಸುಬ್ಬರೆಡ್ಡಿ ಪಂ ಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಗೋಪಿನಾಥ್ ಹಾಗೂ ಇತರರು ಹಾಜರಿದ್ದರು.
ಚಿತ್ರ : ಕೆಜಿಫ್ ನಗರದ ಹೋರವಲಯದ ಪಾರಂಡಹಳ್ಳಿ ಪಂಚಾಯಿತಿ ವ್ಯಾಪ್ತಿ ಅಲ್ಲಿಕುಂಟೆ ಹಾಗೂ ಗರುಡರಾಜಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕಿ ರೂಪಕಲಾ ಶಶಿಧರ್ ಉದ್ಘಾಟಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್