ಕೆರೆಗಳಲ್ಲಿ ಮೀನು ಹಿಡಿಯುವ ಗುತ್ತಿಗೆಯನ್ನು ಸಹಕಾರ ಸಂಘಗಳಿಗೆ ನೀಡಲು ಮನವಿ
ಕೆರೆಗಳಲ್ಲಿ ಮೀನು ಹಿಡಿಯುವ ಗುತ್ತಿಗೆಯನ್ನು ಸಹಕಾರ ಸಂಘಗಳಿಗೆ ನೀಡಲು ಮನವಿ
ಕೋಲಾರ ತಾಲ್ಲೂಕು ಮೀನುಗಾರರ ಸಹಕಾರ ಸಂಘದ ಸರ್ವ ಸದಸ್ಯರ ಸಭೆ ಅಧ್ಯಕ್ಷ ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆಯಿತು.


ಕೋಲಾರ, ೨೧ ಸೆಪ್ಟೆಂಬರ್ (ಹಿ.ಸ) :

ಆ್ಯಂಕರ್ : ಮೀನುಗಾರಿಕೆ ಉದ್ದೇಶಕ್ಕೆ ಈ ಹಿಂದಿನ0ತೆ ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳ ಸುಪರ್ದಿಗೆ ನೀಡುವಂತೆ ಮೀನುಗಾರರ ಸಹಕಾರ ಸಂಘ ನಿಯಮಿತದ ಕೋಲಾರ ತಾಲ್ಲೂಕು ಅಧ್ಯಕ್ಷ ಅಬ್ಬಣಿ ಶಂಕರ್ ಮನವಿ ಮಾಡಿದರು.

ನಗರದ ರೋಟರಿ ಕ್ಲಬ್ ನಲ್ಲಿ ಭಾನುವಾರ ನಡೆದ ಮೀನುಗಾರರ ಸಹಕಾರ ಸಂಘ ನಿಯಮಿತದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೊದಲಿನಿಂದಲೂ ಕೆರೆಗಳನ್ನು ಮೀನುಗಾರಿಕೆ ಉದ್ದೇಶಕ್ಕೆ ಸಂಘಗಳಿಗೆ ನೀಡಲಾಗುತಿತ್ತು. ಸಂಘದಿAದ ಮೀನುಗಾರಿಕೆ ಮಾಡಲಾಗುತಿತ್ತು. ಇದರಿಂದ ಬಡವರಿಗೆ ಅನುಕೂಲವಾಗಿತ್ತು. ಆದರೆ, ರಾಮನಗರದ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಕೆರೆಯನ್ನು ಸಂಘಕ್ಕೆ ನೀಡುತ್ತಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಹಾಗೂ ನೋವಿನ ಸಂಗತಿ. ಕೋಲಾರ ಸೇರಿದಂತೆ ರಾಜ್ಯದಾದ್ಯಂತ ಈಚೆಗೆ ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಮೀನುಗಾರಿಕೆ ನೆಚ್ಚಿಕೊಂಡಿದ್ದ ಸಂಘಕ್ಕೆ ತೊಂದರೆ ಆಗಿದೆ. ಬಡವರು ಬೀದಿಗೆ ಬಿದ್ದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಧಾರದಿಂದ ಸಂಘಗಳ ಪರಿಸ್ಥಿತಿ ಹದಗೆಟ್ಟಿದೆ. ಹಲವಾರು ಬಾರಿ ಮನವಿ ಮಾಡಿದ್ದರೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ಕೆರೆಗಳನ್ನು ಹರಾಜು ಮಾಡಬಾರದೆಂದು, ಸಂಘಗಳಿಗೆ ನೀಡಬೇಕೆಂದು ನ್ಯಾಯಾಲಯ ಮೊರೆ ಹೋಗಿದ್ದು ತಡೆಯಾಜ್ಞೆ ಲಭಿಸಿದೆ. ಮುಂದೆ ಏನಾಗುತ್ತದೆಯೋ ಕಾದು ನೋಡಬೇಕು. ಎಲ್ಲವೂ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿಸಿದೆ ಈ ಮಧ್ಯೆ, ಟೆಂಡರ್ ನಲ್ಲಿ ಸಂಘವೂ ಕೆರೆಗಳಿಗೆ ಬಿಡ್ ಮಾಡಿದ್ದು ಎಷ್ಟು ಸಿಗಲಿದೆ ನೋಡಬೇಕು ಎಂದು ಹೇಳಿದರು. ಇದಕ್ಕೂ ಮೊದಲು ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದರು.

ಈಚೆಗೆ ನಿಧನರಾದ ಸದಸ್ಯರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. ೨೦೨೩-೨೪ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ನಡವಳಿಕೆಗಳನ್ನು ಓದಿ ಅಂಗೀಕರಿಸಲಾಯಿತು. ೨೦೨೪-೨೫ನೇ ಸಾಲಿನ ಲೆಕ್ಕ ಪರಿಶೋಧನೆ ವರದಿ ಹಾಗೂ ಹಣಕಾಸಿನ ತಖ್ತೆಗಳನ್ನು ಓದಿ ಅಂಗೀಕರಿಸುವ ಹಾಗೂ ೨೦೨೫-೨೬ನೇ ಸಾಲಿಗೆ ಅಂದಾಜು ಬಜೆಟ್ ಮಂಡಿಸುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಸಂಘದ ನಿರ್ದೇಶಕರಾದ ಮುನಿಯಪ್ಪ, ವಿ.ಶೇಖರ್, ಶ್ರೀರಾಮ್, ಎಸ್.ಬಾಬು, ಎಂ.ವೆAಕಟರಮಣಪ್ಪ, ಸಿ.ದೇವರಾಜ್, ಕೆ.ಯಲ್ಲಪ್ಪ, ವಿ.ಲೋಕೇಶ್, ಗಂಗಮ್ಮ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.

ಚಿತ್ರ : ಕೋಲಾರ ತಾಲ್ಲೂಕು ಮೀನುಗಾರರ ಸಹಕಾರ ಸಂಘದ ಸರ್ವ ಸದಸ್ಯರ ಸಭೆ ಅಧ್ಯಕ್ಷ ಅಬ್ಬಣಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande