ಲಾರಿಗೆ ಸ್ಕೂಟಿ ಡಿಕ್ಕಿ ; ಮೂವರು ಯುವಕರು ಸ್ಥಳದಲ್ಲೇ ಸಾವು
ಪೂರ್ವ ಸಿಂಗ್‌ಭೂಮ್
Accident


ಪೂರ್ವ ಸಿಂಗ್‌ಭೂಮ್, 10 ಜನವರಿ (ಹಿ.ಸ.) :

ಆ್ಯಂಕರ್ : ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ಮುಸಾಬನಿ ಪೊಲೀಸ್ ಠಾಣೆ ವ್ಯಾಪ್ತಿಯ ಸುರ್ದಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸುರ್ದಾದ ಯೂನಿಯನ್ ಬ್ಯಾಂಕ್ ಸಮೀಪ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕೆಟ್ಟು ನಿಂತ ಲಾರಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ , ಸ್ಕೂಟರ್ ಸಂಪೂರ್ಣವಾಗಿ ಟ್ರಕ್ ಅಡಿಯಲ್ಲಿ ನಜ್ಜುಗುಜ್ಜಾಗಿದೆ.

ಪೊಲೀಸರು ನೀಡಿದ ಮಾಹಿತಿಯಂತೆ, ಘಾಟ್ಸಿಲಾ ಪೊಲೀಸ್ ಠಾಣೆ ವ್ಯಾಪ್ತಿಯ ಜಗನ್ನಾಥಪುರ ನಿವಾಸಿಗಳಾದ ರಾಹುಲ್ ಕರ್ಮಾಕರ್ ಅವರು ತಮ್ಮ ಸಹೋದರರಾದ ರೋಹಿತ್ ಕರ್ಮಾಕರ್ ಮತ್ತು ಸಮೀರ್ ಕರ್ಮಾಕರ್ ಹಾಗೂ ಸೋದರಳಿಯ ರಾಜ್ ಗೋಪ್ ಅವರೊಂದಿಗೆ ಹಗಲು ಸುರ್ದಾದಲ್ಲಿರುವ ಅತ್ತೆಯ ಮನೆಗೆ ಭೇಟಿ ನೀಡಿದ್ದರು. ಶುಕ್ರವಾರ ರಾತ್ರಿ ನಾಲ್ವರೂ ಒಂದೇ ಸ್ಕೂಟರ್‌ನಲ್ಲಿ ಸುರ್ದಾದಿಂದ ಜಗನ್ನಾಥಪುರದ ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ, ಕತ್ತಲೆಯಿಂದಾಗಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ ಗೋಚರಿಸದೆ ಸ್ಕೂಟಿ ನೇರವಾಗಿ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ರೋಹಿತ್ ಕರ್ಮಾಕರ್ (21), ಸಮೀರ್ ಕರ್ಮಾಕರ್ (18) ಹಾಗೂ ರಾಜ್ ಗೋಪ್ (17) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಹುಲ್ ಕರ್ಮಾಕರ್ (26) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ತಕ್ಷಣವೇ ಘಾಟ್ಸಿಲಾ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ನಂತರ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಜೆಮ್ಶೆಡ್ಪುರದ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಘಾಟ್ಸಿಲಾ ಮತ್ತು ಮುಸಾಬನಿ ಪೊಲೀಸ್ ಠಾಣೆಯ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣದ ಮಾಹಿತಿ ಸಂಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande