
ಮಂಗಳೂರು, 10 ಜನವರಿ (ಹಿ.ಸ.) :
ಆ್ಯಂಕರ್ : ಕೇರಳದ ಮಲೆಯಾಳಿ ಭಾಷೆ ಮಸೂದೆಯಿಂದ ಕಾಸರಗೋಡನ್ನು ಹೊರಗಿಡುವಂತೆ ಆ ರಾಜ್ಯದ ಮುಖ್ಯಮಂತ್ರಿಗಳನ್ನು ಒತ್ತಾಯಿಸುವುದರ ಜೊತೆಗೆ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿಯೋಗ ಕೊಂಡೊಯ್ಯುವಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರು ಹಾಗೂ ಕಾಸರಗೋಡು ಕನ್ನಡಿಗರು ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ, ಸದಸ್ಯ ಸುಬ್ಬಯ್ಯ ಕಟ್ಟೆ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa