ಲಾಲ್ ಬಹದ್ದೂರ್ ಶಾಸ್ತ್ರಿ ಪುಣ್ಯತಿಥಿ ; ರಾಷ್ಟ್ರ ನಾಯಕರಿಂದ ಗೌರವ ನಮನ
ನವದೆಹಲಿ, 11 ಜನವರಿ (ಹಿ.ಸ.) : ಆ್ಯಂಕರ್ : ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರು ಗೌರವ ಸಲ್ಲಿಸಿದ್ದಾರೆ. ಅಮಿತ್
Lal-Bahadur-Shastri-Death-Anniversary


ನವದೆಹಲಿ, 11 ಜನವರಿ (ಹಿ.ಸ.) :

ಆ್ಯಂಕರ್ : ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರು ಗೌರವ ಸಲ್ಲಿಸಿದ್ದಾರೆ.

ಅಮಿತ್ ಶಾ, “ಜೈ ಜವಾನ್, ಜೈ ಕಿಸಾನ್” ಘೋಷಣೆಯ ಮೂಲಕ ಶಾಸ್ತ್ರಿ ಜಿ ದೇಶದ ಭದ್ರತೆ ಮತ್ತು ಸ್ವಾವಲಂಬನೆಯನ್ನು ಒಟ್ಟಿಗೆ ಜೋಡಿಸಿದ ಮಹಾನ್ ನಾಯಕರು ಎಂದು ಹೇಳಿದರು. ನಿತಿನ್ ಗಡ್ಕರಿ, ಶಾಸ್ತ್ರಿಯವರು ದೇಶಸೇವೆಯ ಶಾಶ್ವತ ಪ್ರೇರಣೆ ಎಂದು ಶ್ಲಾಘಿಸಿದ್ದಾರೆ.

ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಧರ್ಮೇಂದ್ರ ಪ್ರಧಾನ್ ಹಾಗೂ ಮನೋಹರ್ ಲಾಲ್ ಅವರು ಶಾಸ್ತ್ರಿಯವರ ಸರಳತೆ, ನೈತಿಕತೆ ಮತ್ತು ಸಮರ್ಪಿತ ಜೀವನವು ಇಂದಿಗೂ ದೇಶಕ್ಕೆ ದಾರಿದೀಪವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರು ನಿತಿನ್ ನವೀನ್, ಸಂಬಿತ್ ಪಾತ್ರ ಹಾಗೂ ಮುಖ್ತಾರ್ ಅಬ್ಬಾಸ್ ನಖ್ವಿ ಅವರು, “ಜೈ ಜವಾನ್, ಜೈ ಕಿಸಾನ್” ಎಂಬ ಶಾಸ್ತ್ರಿಯವರ ಸಂದೇಶವು ದೇಶಭಕ್ತಿ, ಕರ್ತವ್ಯ ಮತ್ತು ಸೇವೆಯ ಹಾದಿಯಲ್ಲಿ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande