
ಭದ್ರಾವತಿ, 11 ಜನವರಿ (ಹಿ.ಸ.) :
ಆ್ಯಂಕರ್ : ಭದ್ರಾವತಿ ನಗರದಲ್ಲಿ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಉಪವಿಭಾಗ ಮಟ್ಟದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಾನಸಿಕ ಆರೋಗ್ಯ ಅರಿವು ಕಾರ್ಯಾಗಾರ ಆಯೋಜಿಸಲಾಯಿತು.
ಈ ಶಿಬಿರದಲ್ಲಿ ಭದ್ರಾವತಿಯ ಮಾನಸಿಕರೋಗ ತಜ್ಞರಾದ ಡಾ. ಹರೀಶ್ ಉಪನ್ಯಾಸ ನೀಡಿದರು. ಭದ್ರಾವತಿ ಉಪವಿಭಾಗದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಮೂಲಕ ಪೊಲೀಸ್ ಸಿಬ್ಬಂದಿಗಳಿಗೆ ಮಾನಸಿಕ ಆರೋಗ್ಯ, ಒತ್ತಡ ನಿರ್ವಹಣೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಬಗ್ಗೆ ಮಾಹಿತಿ ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa