
ದಾವಣಗೆರೆ, 18 ಜನವರಿ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲಾ ಮಾನವ ಅಭಿವೃದ್ದಿ ವರದಿ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ದಿ ದೂರದೃಷ್ಠಿ ಯೋಜನೆ -2031 ರ ವರದಿಗಳ ತಯಾರಿಕೆಯ ಪ್ರಕ್ರಿಯೆ ಕಾರ್ಯಗಳು ತುರ್ತಾಗಿ ಕೈಗೊಳ್ಳಬೇಕಾಗಿರುವುದರಿಂದ ಜಿಲ್ಲೆಯಲ್ಲಿನ ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜನವರಿ 21 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa