
ಗದಗ, 07 ಜನವರಿ (ಹಿ.ಸ.) :
ಆ್ಯಂಕರ್ : ಪ್ರಸಕ್ತ ಸಾಲಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ ಪಿಡಿಪಿಎಸ್ ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಲ್ ಗೆ 2150 ರಂತೆ ಸರ್ಕಾರ ಜನೆವರಿ 4 ರಿಂದ ಆದೇಶ ಹೊರಡಿಸಿದೆ.
ಮೆಕ್ಕೆಜೊಳವನ್ನು ರಾಜ್ಯ ಸಹಕಾರಿ ಮಾರಾಟ ಮಂಡಳ ನಿಯಮಿತ ಇವರ ಮುಖಾಂತರ ಖರೀದಿಸಲು ತಿಳಿಸಿದೆ. ಪ್ರಸಕ್ತವಾಗಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಪ್ರತಿ ಕ್ವಿಂಟಲ್ ಗೆ 1,900 ರಲ್ಲಿ ವಹಿವಾಟಾಗುತ್ತಿದ್ದು ವ್ಯತ್ಯಾಸದ ಮೊತ್ತ ರೂ.250 ಗಳನ್ನು ಸರ್ಕಾರದ ನಿಯಮಾನುಸಾರ ಅರ್ಹ ರೈತರಿಗೆ ತಲುಪಿಸುವ ಕ್ರಮ ಸರಿಯಾಗಿ ಆಗಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಆದೇಶಿಸಿದರು.
ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಮೆಕ್ಕೆ ಜೋಳ ಉತ್ಪನ್ನವನ್ನು ಗದಗ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಕೃಷಿ ಉತ್ಪನ್ನ ಮಾರುಕಟ್ಟೆ / ಉಪ ಮಾರುಕಟ್ಟೆಗಳಲ್ಲಿ ಯುಎನ್ಪಿ ವೇದಿಕೆ ಮೂಲಕ 3.86 ಲಕ್ಷ ಕ್ವಿಂಟಲ್ ಪ್ರಮಾಣದಲ್ಲಿ ಸರ್ಕಾರದ ಆದೇಶದನ್ವಯ ವಹಿವಾಟು ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ಕ್ರಮ ವಹಿಸುವಂತೆ ಸೂಚಿಸಿದರು.
ಈ ಯೋಜನೆಯಿಂದ ಪ್ರತಿ ಎಕರೆಗೆ 12 ಕ್ವಿಂಟಾಲ್ನAತೆ, ಫ್ರುಟ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತಿರ್ಣಕ್ಕನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ 50 ಕ್ವಿಂಟಾಲ್ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು. ಮೆಕ್ಕೆಜೋಳದ ಎಫ್.ಎ.ಕ್ಯೂ ಗುಣಮಟ್ಟವನ್ನು ಕಡ್ಡಾಯವಾಗಿ ಪರಿಶೀಲಿಸಿ ದೃಢೀಕರಿಸಲು ತಾಂತ್ರಿಕ ಅಧಿಕಾರಿಗಳನ್ನು ನೇಮಿಸಬೇಕು ಎಂದರು.
ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಎಥಿನಾಲ್ ಉತ್ಪಾದನೆಗಾಗಿ, ಕುಕ್ಕುಟ ಮತ್ತು ಪಶು ಆಹಾರ ತಯಾರಿಕಾ ಘಟಕಗಳಿಗೆ ಹಾಗೂ ಕೆಎಂಎಫ್ಗಳಿಗೆ ಅವಶ್ಯಕವಿರುವ ಮೆಕ್ಕೆಜೋಳ ಪೂರೈಕೆ ಮಾಡಿರುವ ರೈತರಿಗೆ ಸದರಿ ಯೋಜನೆಯು ಅನ್ವಯಿಸದಂತೆ ತಂತ್ರಾAಶದಲ್ಲಿ ಇಂದೀಕರಿಸಲು ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿಯ ಅಧ್ಯಕ್ಷರು ಸೂಚಿಸಿದರು.
ಸರ್ಕಾರದಿಂದ ಮೆಕ್ಕೆಜೋಳದ ಬೆಲೆ ವ್ಯತ್ಯಾಸ ಮೊತ್ತ ಪಾವತಿಯನ್ನು ಡಿಬಿಟಿ ಮೂಲಕ ರೈತರಿಗೆ ಪಾವತಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಸದರಿ ಯೋಜನೆಯಡಿ ರೈತರ ನೋಂದಣಿ ಕಾರ್ಯವನ್ನು ಯೋಜನಾ ಅನುಷ್ಟಾನದ ಏಜೆನ್ಸಿ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಪಿಎಂಸಿ ಪ್ರಾಂಗಣದಲ್ಲಿ ತೆರೆಯುವ ಕೇಂದ್ರಗಳಲ್ಲಿ ಮಾತ್ರ ನೊಂದಾಯಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಮೆಕ್ಕೆಜೋಳ ಉತ್ಪನ್ನದ ಮೊದಲ ವಹಿವಾಟು ಯುಎಂಪಿ ತಂತ್ರಾಂಶದಲ್ಲಿ ಆಗುವ ದಿನಾಂಕದಿಂದ ರಾಜ್ಯಾದ್ಯಂತ ಒಂದು ತಿಂಗಳ ಅವಧಿಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿಯೇ ಅರ್ಹ ರೈತರಿಗೆ ಸೌಲಭ್ಯ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಸಿ.ಎನ್.ಶ್ರೀಧರ್ ಹೇಳಿದರು.
ರಾಜ್ಯ ಸಹಕಾರ ಮಾರಾಟ ಮಂಡಳ ಮತ್ತು ಎಪಿಎಂಸಿ ಸಮಿತಿಯ ಕಾರ್ಯದರ್ಶಿಗಳು ದಿನಂಪ್ರತಿ ಆವಕವಾಗುವ ಮೆಕ್ಕೆಜೋಳದ ಉತ್ಪನ್ನದ ಪ್ರಮಾಣ ವಹಿವಾಟಾದ ಪ್ರಮಾಣ ಮತ್ತು ರೈತರ ಸಂಖ್ಯೆ ಇತ್ಯಾದಿ ವಿವರಗಳನ್ನು ಅಂದಿನ ದಿನವೇ ಯುಎಂಪಿ ವೇದಿಕೆಯಲ್ಲಿ ತಪ್ಪದೇ ಇಂದೀಕರಿಸಬೇಕು ಎಂದು ಕಟ್ಟುನಿಟ್ಟಾಗಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚನೆ ನೀಡಿದರು.
ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ ಸದರಿ ಯೋಜನೆಯ ಮೆಕ್ಕೆಜೋಳ ಖರೀದಿಗೆ ಜಿಲ್ಲೆಯ ಗದಗ , ನರಗುಂದ, ಲಕ್ಷ್ಮೇಶ್ವರ ಮುಂಡರಗಿ, ಗಜೇಂದ್ರಗಡ ಎಪಿಎಂಸಿ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಕಾರ ಸಂಘಗಳ ಇಲಾಖೆ ಅಧಿಕಾರಿಗಳು, ಮಾರ್ಕೆಟಿಂಗ್ ಫೆಡರೇಷನ್ ಶಾಖಾ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಇತರರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP