
ನವದೆಹಲಿ, 10 ಫೆಬ್ರವರಿ (ಹಿ.ಸ.):
ಆ್ಯಂಕರ್:
ಸಂಸತ್ತಿನ ಅಧಿವೇಶನದ ವೇಳೆ ಸರ್ಕಾರದ ವಿರುದ್ದ ಹೋರಾಟದ ಕಾರ್ಯತಂತ್ರದ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷ ಮಂಗಳವಾರ ಮಹತ್ವದ ಸಭೆ ನಡೆಸಿತು. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯಲ್ಲಿನ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಸಭೆಯಲ್ಲಿ ಭಾಗವಹಿಸಿದ್ದರು. ಇಂಡಿಯಾ ಮೈತ್ರಿಕೂಟದ ಸದನದ ನಾಯಕರು ಅಧಿವೇಶನದ ಅವಧಿಯಲ್ಲಿ ಪ್ರತಿ ಪಕ್ಷದ ಪಾತ್ರ, ಕಾರ್ಯಪದ್ಧತಿ ಹಾಗೂ ಸಂಯೋಜಿತ ತಂತ್ರಗಳ ಕುರಿತು ಚರ್ಚೆ ನಡೆಸಿದರು.
ಇದಕ್ಕೂ ಮುನ್ನ, ಲೋಕಸಭೆಯಿಂದ ಅಮಾನತುಗೊಂಡಿರುವ ಎಂಟು ಪ್ರತಿ ಪಕ್ಷದ ಸಂಸದರು ಸಂಸತ್ ಭವನದ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು. ಗುರುದೀಪ್ ಸಿಂಗ್ ಔಜ್ಲಾ, ಮಾಣಿಕ್ಕಮ್ ಟ್ಯಾಗೋರ್, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣ್ ಕುಮಾರ್ ರೆಡ್ಡಿ, ಹಿಬಿ ಈಡನ್ ಮತ್ತು ಡೀನ್ ಕುರಿಯಾಕೋಸ್ ಸೇರಿದಂತೆ ಅಮಾನತುಗೊಂಡ ಸಂಸದರು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟರ್ಗಳನ್ನು ಹಿಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa