ಉತ್ತರ ಪ್ರದೇಶದಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ
ಮಥುರಾ, 10 ಫೆಬ್ರವರಿ (ಹಿ.ಸ.) : ಆ್ಯಂಕರ್ : ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಒಂದೇ ಮನೆಯಲ್ಲಿ ಗಂಡ, ಹೆಂಡತಿ ಹಾಗೂ ಮೂವರು ಮಕ್ಕಳು ಸೇರಿ ಐದು ಜನರ ಮೃತದೇಹಗಳು ಪತ್ತೆಯಾಗಿರುವ ಘಟನೆ ಗ್ರಾಮದಲ್ಲಿ ಸಂಚಲನ ಮೂಡಿಸಿದೆ. ಪ್ರಾಥಮಿಕ ತನಿಖೆಯ ಪ
Suicide


ಮಥುರಾ, 10 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಒಂದೇ ಮನೆಯಲ್ಲಿ ಗಂಡ, ಹೆಂಡತಿ ಹಾಗೂ ಮೂವರು ಮಕ್ಕಳು ಸೇರಿ ಐದು ಜನರ ಮೃತದೇಹಗಳು ಪತ್ತೆಯಾಗಿರುವ ಘಟನೆ ಗ್ರಾಮದಲ್ಲಿ ಸಂಚಲನ ಮೂಡಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಕುಟುಂಬವು ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತರನ್ನು ರೈತ ಮನೀಶ್ (35), ಅವರ ಪತ್ನಿ ಸೀಮಾ (32), ಪುತ್ರಿಯರಾದ ಹನಿ (5), ಪ್ರಿಯಾಂಶಿ (4) ಹಾಗೂ ಪುತ್ರ ಪಂಕಜ್ (2) ಎಂದು ಗುರುತಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ಸುಮಾರು 10 ಗಂಟೆಗೆ ಮನೆಯೊಳಗೆ ಎಲ್ಲರೂ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಲಭಿಸಿತು. ಮನೆಯ ಗೋಡೆಯ ಮೇಲೆ “ಆಯ್ಕೆಯಿಂದ ಆತ್ಮಹತ್ಯೆ” ಎಂಬ ಬರಹ ಕಂಡು ಬಂದಿದ್ದು, ಆತ್ಮಹತ್ಯೆ ಪತ್ರವೂ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮನೀಶ್ ಎಂಟು ವರ್ಷಗಳ ಹಿಂದೆ ಸೀಮಾರನ್ನು ವಿವಾಹವಾಗಿದ್ದು, ತಮ್ಮ ಕುಟುಂಬದೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ಈ ಸಾಮೂಹಿಕ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ನೆರೆಹೊರೆಯವರು, ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರಿಂದ ವಿಚಾರಣೆ ನಡೆಯುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ದೃಢಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande