ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
ವಿಜಯಪುರ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಹಾಶಿವರಾತ್ರಿ ಪ್ರಯುಕ್ತ ಶ್ರೀಶೈಲಗೆ ತೆರುಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮೂಲಕ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾ
ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ


ವಿಜಯಪುರ, 11 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮಹಾಶಿವರಾತ್ರಿ ಪ್ರಯುಕ್ತ ಶ್ರೀಶೈಲಗೆ ತೆರುಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮೂಲಕ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಬಸ್ ನಿಲ್ದಾಣದಿಂದ 18-02-2026ರವರೆಗೆ ಜನದಟ್ಟಣೆಗನುಗುಣವಾಗಿ ಶ್ರೀಶೈಲಕ್ಕೆ ಹೆಚ್ಚುವರಿ ಬಸ್ಸುಗಳು ಕಾರ್ಯಾಚರಿಸಲಿದ್ದು, ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಸಹ ಕಲ್ಪಿಸಿದೆ.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ವಿಜಯಪುರ 1ನೇ ಘಟಕ ವ್ಯವಸ್ಥಾಪಕರು- ಮೊ:7760992263, ವಿಜಯಪುರದ 2ನೇ ಘಟಕದ ವ್ಯವಸ್ಥಾಪಕರು ಮೊ:7760992264, ಸಿಂದಗಿ ಘಟಕ ವ್ಯವಸ್ಥಾಪಕರು ಮೊ:7760992266, ಮುದ್ದೇಬಿಹಾಳ ಘಟಕ ವ್ಯವಸ್ಥಾಪಕರು ಮೊ:7760992267, ತಾಳಿಕೋಟಿ ಘಟಕ ವ್ಯವಸ್ಥಾಪಕರು ಮೊ:7760992268, ವೀರರಾಣಿ ಕಿತ್ತೂರ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣದ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊ:7760992258 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande