
ವಿಜಯಪುರ, 11 ಫೆಬ್ರವರಿ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಪರಿಮಳ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇದೆ ದಿನಾಂಕ ೨೫ ರಂದು ಮಂತ್ರಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಸ್ವಾಮಿಗಳು ಬಸನಗೌಡರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿರುವರು.
ಬಸನಗೌಡರು ಪರಿಮಳ ಪ್ರಶಸ್ತಿಗೆ ಭಾಜನರಾಗಿರುವದರಿಂದ ಇಂದು ಅವರಿಗೆ ಮಂತ್ರಾಲಯ ಮಠದ ವಿಜಯಪುರ ಶಾಖೆ ನಂಜನಗೂಡು ರಾಯರಮಠದ ವಿಚಾರಣಕರ್ತ ಗೋಪಾಲ ನಾಯಕ ಅವರು ಶೇಷವಸ್ತ್ರ ಫಲ ಮತ್ತು ರಾಯರ ಭಾವಫಲಕ ನೀಡಿ ಗೌರವಿಸಿದರು.
ಈ ಸಮಯದಲ್ಲಿ ನಗರದ ಶ್ರೀಕೃಷ್ಣ-ವಾದಿರಾಜ ಮಠದ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸದಸ್ಯರಾದ ವಿಕಾಸ ಪದಕಿ ಮತ್ತು ವಿಜಯ ಜೋಶಿ ಉಪಸ್ಥಿತರಿದ್ದರು.
ಬಸನಗೌಡರು ಸನಾತನ ಧರ್ಮ ಪ್ರತಿಪಾದಕರಾಗಿ ಹಿಂದೂ ಸಮಾಜದ ಏಳೆಗೆ ಸಾಕಷ್ಟು ಶ್ರಮಿಸಿದ್ದಾರೆಂದು ಈ ಸಮಯದಲ್ಲಿ ಸ್ಮರಿಸಲಾಯಿತು.
ನಗರದ ಅಭಿವೃದ್ಧಿಗೂ ಅವರು ಅನುದಾನ ಕೊಡಿಸುವಲ್ಲಿ ಅವರು ಯಶ ಕಂಡಿದ್ದಾರೆ. ರಸ್ತೆ ಸುಧಾರಣೆಗೆ ಹಣ ಬಿಡುಗಡೆ ಮಾಡಿಸಿದ್ದು ಪ್ರಶಂಸನೀಯ ಎಂದು ಅಭಿಪ್ರಾಯಪಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande