
ಬೆಂಗಳೂರು, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ಸಮುದಾಯಗಳ ಒಳ ಮೀಸಲಾತಿ ವಿಧೇಯಕದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೆಂಗಳೂರಿನ ಲೋಕ ಭವನದಲ್ಲಿ ಸಚಿವರ ನಿಯೋಗ ಭೇಟಿ ಮಾಡಿ ಚರ್ಚೆ ನಡೆಸಿತು.
ಸಚಿವರ ನಿಯೋಗವು ಒಳ ಮೀಸಲಾತಿ ವಿಧೇಯಕದ ಅಗತ್ಯತೆ, ಸಾಮಾಜಿಕ ನ್ಯಾಯದ ಪರಿಪಾಲನೆ ಹಾಗೂ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿ ಕುರಿತು ರಾಜ್ಯಪಾಲರಿಗೆ ವಿವರ ನೀಡಿತು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಸಚಿವರಾದ ಜಿ.ಪರಮೇಶ್ವರ, ಕೆ.ಹೆಚ್. ಮುನಿಯಪ್ಪ, ಡಾ. ಹೆಚ್.ಸಿ. ಮುನಿಯಪ್ಪ, ಆರ್.ಬಿ. ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa