
ಬೆಂಗಳೂರು, 10 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಜ್ಯ ವಿಧಾನ ಪರಿಷತ್ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಶಿಕ್ಷಕರ ಕ್ಷೇತ್ರದಿಂದ ಶಶೀಲ್ ಜಿ. ನಮೋಶಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಇದೇ ವೇಳೆ ಪದವೀಧರ ಕ್ಷೇತ್ರಗಳಿಂದ ಎಸ್.ವಿ. ಸಂಕನೂರು ಮತ್ತು ಕೆ.ಎಂ. ಸುರೇಶ್ ಅವರಿಗೆ ಪಕ್ಷದ ಟಿಕೆಟ್ ನೀಡಲಾಗಿದೆ.
ಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರ ಹಾಗೂ ಪದವೀಧರರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಸಾಮರ್ಥ್ಯ ಹೊಂದಿದ ಅಭ್ಯರ್ಥಿಗಳನ್ನು ಪಕ್ಷ ಆಯ್ಕೆ ಮಾಡಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಮತ್ತು ಶಿಕ್ಷಣ ವಲಯದ ಸಮಸ್ಯೆಗಳ ಪರಿಹಾರಕ್ಕೆ ಈ ಅಭ್ಯರ್ಥಿಗಳು ಶ್ರಮಿಸಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷ ವ್ಯಕ್ತಪಡಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa