
ವಿಜಯಪುರ, 15 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಕೆಕೆಆರ್ಟಿಪಿ ವತಿಯಿಂದ ನಿರ್ಮಿಸಲಾದ ನಿಗಮದ ಸಿಬ್ಬಂದಿಗಳ ನೂತನ ವಸತಿ ನಿಲಯಗಳನ್ನು ಶಾಸಕ ಅಪ್ಪಾಜಿಗೌಡ ನಾಡಗೌಡ ಉದ್ಘಾಟಿಸಿದರು.
ನಿಗಮದ ಸಿಬ್ಬಂದಿಗಳಿಗೆ ಉತ್ತಮ ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ನಿರ್ಮಿಸಲಾದ ಈ ವಸತಿ ನಿಲಯಗಳು ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗೆ ಅವರಿಗೆ ಸುಸಜ್ಜಿತ ವಾತಾವರಣ ಒದಗಿಸಲಿದೆ ಎಂದು ಕಾರ್ಯಕ್ರಮದಲ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಿಗಮದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande