
ವಿಜಯಪುರ, 15 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಪವಿತ್ರ ರಂಜಾನ ಮಾಸದ ಅಂಗವಾಗಿ ಇಫ್ತಿಯಾರ್ ಕೂಟದಲ್ಲಿ ಮುದ್ದೇಬಿಹಾಳ ಶಾಸಕ ಅಪ್ಪಾಜಿಗೌಡ ನಾಡಗೌಡ ಭಾಗವಹಿಸಿ ಶುಭ ಕೊರಿದರು.
ಉಪವಾಸ ಮುರಿಯುವ ಈ ಇಫ್ತಿಯಾರ್ ಕಾರ್ಯಕ್ರಮದಲ್ಲಿ ಸಮಸ್ತ ಮುಸ್ಲಿಂ ಬಂಧುಗಳು ಭಾಗವಹಿಸಿ ಧಾರ್ಮಿಕ ಸೌಹಾರ್ದತೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಆಗಮಿಸಿ ಮುಸ್ಲಿಂ ಬಂಧುಗಳಿಗೆ ಕೃತಜ್ಞತೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಸಮುದಾಯದ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande