
ನವದೆಹಲಿ, 15 ಮಾರ್ಚ್ (ಹಿ.ಸ.):
ಆ್ಯಂಕರ್:ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಮತದಾನವು ಏಪ್ರಿಲ್ 9, 2026ರಂದು ನಡೆಯಲಿದೆ.
ಭಾರತೀಯ ಚುನಾವಣಾ ಆಯೋಗವು ಪ್ರಕಟಿಸಿದ ವೇಳಾಪಟ್ಟಿಯ ಪ್ರಕಾರ, ಈ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಏಪ್ರಿಲ್ 9ರಂದು ನಡೆಯಲಿದ್ದು, ನಂತರ ಮತ ಎಣಿಕೆ ನಡೆಯಲಿದೆ. ಸಂಬಂಧಿತ ಜಿಲ್ಲೆಗಳ ಚುನಾವಣಾ ಅಧಿಕಾರಿಗಳು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ.
ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಕೂಡ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಪ್ರಮುಖ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ ಹಾಗೂ ಪ್ರಚಾರ ಕಾರ್ಯಗಳಿಗೆ ಸಜ್ಜಾಗುತ್ತಿವೆ.
ಮತದಾರರಿಗೆ ಅನುಕೂಲವಾಗುವಂತೆ ಮತಗಟ್ಟೆಗಳ ವ್ಯವಸ್ಥೆ, ಭದ್ರತಾ ಕ್ರಮಗಳು ಹಾಗೂ ಚುನಾವಣಾ ನೀತಿ ಸಂಹಿತೆಯ ಜಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa